Featured

ವೈಭವದ ಶೋಭಾಯಾತ್ರೆಯೊಂದಿಗೆ ಉಚ್ಚಿಲ ದಸರಾ ಸಂಪನ್ನ – Vishwanews24

ವೈಭವದ ಶೋಭಾಯಾತ್ರೆಯೊಂದಿಗೆ ಉಚ್ಚಿಲ ದಸರಾ ಸಂಪನ್ನ

ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಅದ್ದೂರಿಯಾಗಿ ಉಚ್ಚಿಲ ದಸರಾ- 2023 ಮೆರವಣಿಗೆ ಮಂಗಳವಾರ ಲಕ್ಷಾಂತರ ಭಕ್ತರ ಸಮ್ಮುಖ ಸಂಪನ್ನಗೊಂಡಿತು.

ವಿಜಯದಶಮಿಯ ಪರ್ವಕಾಲದಲ್ಲಿ ಶ್ರೀ ಶಾರದಾ ಮಾತೆ ಮತ್ತು ನವದುರ್ಗೆಯರ ಭವ್ಯವಾದ ಶೋಭಾಯಾತ್ರೆಗೆ ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ನೇತೃತ್ವದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ, ಗೋಲ್ಡ್ ಫಿಂಚ್ ಹೋಟೆಲ್ಸ್ ಸಮೂಹದ ಸಿಎಂಡಿ ಪ್ರಕಾಶ್ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್ ಅವರು ಉಚ್ಚಿಲ ಕ್ಷೇತ್ರದ ಅಧಿದೇವತೆ ಶ್ರೀ ಮಹಾಲಕ್ಷ್ಮೀ ಅಮ್ಮನವರ ಭಾವಚಿತ್ರ ಹೊತ್ತ ಆನೆ ಅಂಬಾರಿಯ ಮೇಲೆ ಪುಷ್ಪವೃಷ್ಟಿಗೈಯುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು.

ಲಕ್ಷಾಂತರ ಭಕ್ತರು ಭಾವುಕರಾಗಿ ಕಾದು ಕುಳಿತು ಮೆರವಣಿಗೆಯಲ್ಲಿ ಸಾಗಿ ಬಂದ ಮೊಗವೀರ ಸಮಾಜದ ಕುಲಗುರು ಮಾಧವಮಂಗಳ ಗುರು, ಶ್ರೀ ಕ್ಷೇತ್ರ ಉಚ್ಚಿಲದ ಸ್ಥಾಪಕರಾದ ಸದಿಯ ಸಾಹುಕಾರರ ಮೂರ್ತಿಯ ಟ್ಯಾಬ್ಲೊಗಳೊಂದಿಗೆ ಪರ್ಸಿನ್ ಬೋಟ್ ಪ್ರತಿಕೃತಿ, ಮೀನುಗಾರಿಕಾ ಪ್ರತಿಬಿಂಬವಾಗಿ ಟ್ಯಾಬ್ಲೋ, ಹುಲಿವೇಷ, ಭಜನಾ ಸಂಕೀರ್ತನೆಗಳ ತಂಡ, ವ್ಯಾಯಾಮ ಶಾಲಾ ತಾಲೀಮು ತಂಡ, ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಆಕರ್ಷಕ ವೇಷಭೂಷಣಗಳು ಮೆರವಣಿಗೆಯ ವೈಭವವನ್ನು ಸಾಕ್ಷೀಕರಿಸಿತು.

ಜಿಲ್ಲಾಡಳಿತದ ನಿರ್ದೇಶನದಂತೆ ಜಿಲ್ಲಾ ಪೊಲೀಸ್ ತಂಡ ಮೆರವಣಿಗೆಯುದ್ದಕ್ಕೂ ಸಾರ್ವಜನಿಕರಿಗೆ ಸಮಸ್ಯೆಯುಂಟಾಗದಂತೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದು, ಮೆರವಣಿಗೆ ಸಾಂಗವಾಗಿ ನಡೆಯಲು ಕಾರಣವಾಯಿತು. ಮೆರವಣೆಗೆಯ ಉದ್ದಕ್ಕೂ ರಸ್ತೆ ಪಕ್ಕ ಲಕ್ಷಾಂತರ ಭಕ್ತರು ಭವ್ಯ ಮೆರವಣಿಗೆಯನ್ನು ಸ್ವಾಗತಿಸಿ ಭಾವುಕರಾದರು.

ದ.ಕ. ಮೊಗವೀರ ಮಹಾಜ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಮಹಿಳಾ ವಿಭಾಗದ ಅಧ್ಯಕ್ಷೆ ಉಷಾರಾಣಿ, ಪ್ರಮುಖರಾದ ನಯನಾ ಗಣೇಶ್, ಆನಂದ ಸಿ.ಕುಂದರ್, ಕೇಶವ ಕುಂದರ್ ಮತ್ತಿತರ ಗಣ್ಯರು ಇದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago