Featured

ವೈಭವದ ಶೋಭಾ ಯಾತ್ರೆಯೊಂದಿಗೆ ಅದ್ದೂರಿ ತೆರೆಕಂಡ ಉಡುಪಿ – ಉಚ್ಚಿಲ ದಸರಾ ಮಹೋತ್ಸವ – vishwanews24

ವೈಭವದ ಶೋಭಾ ಯಾತ್ರೆಯೊಂದಿಗೆ ಅದ್ದೂರಿ ತೆರೆಕಂಡ ಉಡುಪಿ – ಉಚ್ಚಿಲ ದಸರಾ ಮಹೋತ್ಸವ

ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವದುರ್ಗೆಯರ ಸಹಿತ ಶಾರದಾ ಮಾತೆ ವಿಗ್ರಹಗಳ ಜಲಸ್ತಂಭನದೊಂದಿಗೆ 10 ದಿನಗಳ ಕಾಲ ನಡೆದ ಉಡುಪಿ- ಉಚ್ಚಿಲ ದಸರಾ ಮಹೋತ್ಸವ ವೈಭವದಿಂದ ಸಮಾಪನಗೊಂಡಿತು.

ಚಂಡಿಕಾ ಯಾಗ ವಿಸರ್ಜನಾ ಶೋಭಾಯಾತ್ರೆಯ ಪ್ರಯುಕ್ತ ಬೆಳಗ್ಗಿನಿಂದಲೇ ಸಹಸ್ರಾರು ಮಂದಿ  ಬಂದಿದ್ದು ಬೆಳಿಗ್ಗೆ 10.30 ಕ್ಕೆ ಪಲ್ಲ ಪೂಜೆ ನೆರವೇರಿಸಿ 11 ರಿಂದಲೇ ಮಹಾ ಅನ್ನಸಂತರ್ಪಣೆ ಆರಂಭವಾಯಿತು. ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ ಹಾಗೂ ಶಾರದಾ ಮಾತೆಗೆ ಮಹಾ ಮಂಗಳಾರತಿ ನಡೆಯಿತು.

ಕ್ಷೇತ್ರದ ಪ್ರಧಾನ ತಂತ್ರಿ ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ಮಹಾಚಂಡಿಕಾಯಾಗ ನಡೆದು, ಸಹಸ್ರ ಸಂಖ್ಯೆಯಲ್ಲಿ ನಾರಿಕೇಳ, ನವಧಾನ್ಯ, ರವಕೆ ಕಣ, ರೇಷ್ಮೇ ಸೀರೆ, ಫಲವಸ್ತುಗಳನ್ನು ಸಮರ್ಪಿಸಿ ಪೂರ್ಣಾಹುತಿ ನೆರವೇರಿಸಲಾಯಿತು. ದಸರಾ ಪ್ರಯುಕ್ತ ನವದುರ್ಗೆಯರ ಸಹಿತ ಶಾರದಾ ವಿಗ್ರಹಗಳ ಶೋಭಾಯಾತ್ರೆ ನಡೆಯಿತು.

ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಿಂದ 3 ಗಂಟೆಗೆ ಧಾರ್ಮಿಕ ವಿಧಿವಿಧಾನಗಳ ಬಳಿಕ ಸಂಜೆ 4 ಗಂಟೆಗೆ ದೇವಳದ ಗೋಪುರದ ಮುಂಭಾಗದಲ್ಲಿ ಅಂಬಾರಿ ಹೊತ್ತ ಆನೆಯ ಟ್ಯಾಬ್ಲೋಗೆ ಪುಷ್ಪಾರ್ಚನೆ ನಡೆಸಿ ಶೋಭಾ ಯಾತ್ರೆಗೆ ಗಣ್ಯರು ಚಾಲನೆ ನೀಡಿದರು. ಅಂಬಾರಿ ಹೊತ್ತ ಟ್ಯಾಬ್ಲೊ, ನವದುರ್ಗೆಯು ಮತ್ತು ಶಾರದಾ ಮಾತೆಯ ವಿಗ್ರಹಕ್ಕೆ ಡ್ರೋನ್ ಮೂಲಕ ನಡೆದ ಪುಷ್ಪಾರ್ಚನೆ ಸೇರಿದ ಭಕ್ತರಲ್ಲಿ ಕಣ್ಮನ ಸೆಳೆಯಿತು.
ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ, ಎರ್ಮಾಳು ಜನಾರ್ದನ ದೇವಸ್ಥಾನ, ಎರ್ಮಾಳು ಬಡಾ, ಉಚ್ಚಿಲ ಪೇಟೆ, ಮೂಳೂರು, ಕೊಪ್ಪಲಂಗಡಿಯ ಮೂಲಕ ಸಾಗಿದ ಶೋಭಾ ಯಾತ್ರೆಯಲ್ಲಿ 45 ಟ್ಯಾಬ್ಲೊ, ಭಜನಾ ತಂಡಗಳು, ವಾದ್ಯ ಮೇಳಗಳು ಉಚ್ಚಿಲ ದಸರಾ ವೈಭವಕ್ಕೆ ಮೆರುಗು ತಂದವು. ಬಳಿಕ ಸಾಮೂಹಿಕ ಮಂಗಳರಾತಿ ಬಳಿಕ ಸಮುದ್ರ ಪೂಜೆ ಸಲ್ಲಿಸಲಾಯಿತು.

ಶಾರದೆ ಮತ್ತು ನವದುರ್ಗೆಯರನ್ನು ಹೊತ್ತುಕೊಂಡ ಸ್ತಬ್ಧಚಿತ್ರಗಳ ಸಹಿತವಾಗಿ ದೇವಸ್ಥಾನದ ಬಿರುದಾವಳಿ, ಸಿಂದೂರ ಯುದ್ದ ವಿಮಾನದ ಮಾದರಿ, ವಿಶೇಷ ಗಮನ ಸೆಳೆದಿದ್ದು, ಅದರೊಂದಿಗೆ 20 ಬಣ್ಣದಕೊಡೆ, ಕೊಂಬು ಡೋಲು, ಸ್ಯಾಕ್ಸೋಫೋನ್, ಸಿಂಗಾರಿ ಮೇಳ, ನಾಸಿಕ್ ಬ್ಯಾಂಡ್, ಚೆಂಡೆ, ಬ್ಯಾಂಡ್ ಸೆಟ್, ಕೋಳಿ ಮತ್ತು ಮೀನು, ಸು ಫ್ರಂ ಸೋ ಚಿತ್ರದ ಗೊಂಬೆ ಬಳಗ, ಕೇರಳ ಗೊಂಬೆ, ಕುಣಿತ ಭಜನೆ, ತಾಲೀಮು, ಆಮೆ, ಕುರುಕ್ಷೇತ್ರ, ಮತ್ಸ್ಯಾವತಾರ, ಲಂಕಿಣಿ, ಉಚ್ಚಿಲ ಮಹಾಲಕ್ಷ್ಮೀ, ವರಾಹಾವತಾರ, ಮಂತ್ರ ದೇವತೆ, ಡ್ರ್ಯಾಗನ್ ಟ್ಯಾಬ್ಲೊ, ಪರ್ಸಿನ್ ಬೋಟ್, ಅಯ್ಯಪ್ಪ ಮಹಿಸಾಸುರ ಮರ್ದಿನಿ, ಹುಲಿವೇಷ, ಅಯೋಧ್ಯ, ಪರಿಸರ, ದಶಾವತಾರ, ರಾಕ್ಷಸ ವೇಷಗಳ ಟ್ಯಾಬ್ಲೊ, ಡಿಜೆ ಶೋಭಾ ಯಾತ್ರೆಯ ಮೆರುಗನ್ನು ಹೆಚ್ಚಿಸಿದವು.

ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡವರಿಗೆ ಶುದ್ದ ಕುಡಿಯುವ ನೀರಿನ ಪೊರೈಕೆಗಾಗಿ ನೀರು ಸರಬರಾಜು ವಾಹನ, ಶುಚಿತ್ವ ವಾಹನ, ಕುಡಿಯುವ ನೀರಿನ ವಾಹನ ಮತ್ತು ಮೆಟಲೈಟ್ ವಾಹನಗಳು ಮೆರವಣಿಗೆಗೆ ಸಾಥ್ ನೀಡಿದವು.

ಉಚ್ಚಿಲ ದಸರಾ ರೂವಾರಿ ಜಿ. ಶಂಕರ್, ಶಾಲಿನಿ ಜಿ. ಶಂಕರ್, ಮತ್ತು ಕುಟುಂಬಸ್ಥರು, ದಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ ಸುವರ್ಣ, ಮುಖಂಡರಾದ ವಿನಯ ಕುಮಾರ್ ಸೊರಕೆ, ಪ್ರಸಾದ್ ರಾಜ್ ಕಾಂಚನ್, ಗಿರಿಧರ ಸುವರ್ಣ, ವಿನಯ ಕರ್ಕೆರಾ, ಶರಣ್ ಕುಮಾರ್, ಸತೀಶ್ ಕುಂದರ್, ಸತೀಶ್ ಅಮೀನ್ ಪಡುಕೆರೆ ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

3 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

6 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

7 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

7 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

7 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

7 hours ago