Featured

ವೈಯಕ್ತಿಕ ದ್ವೇಷಗಳನ್ನು ಬಿಟ್ಟು ಬಿಜೆಪಿ ಸೋಲಿಸಲು ಕೆಲಸ ಮಾಡಿ : ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಎಂ ಕರೆ

ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಉಪ ಚುನಾವಣೆ ಬಂದಿದೆ, ಐದು ಕ್ಷೇತ್ರಗಳ ಉಪ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಸ್ವಾಮಿ, ಶಿವಮೊಗ್ಗ ಕ್ಷೇತ್ರಕ್ಕೆ ಜೆಡಿಎಸ್- ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ, ಹೀಗಾಗಿ ವಯಕ್ತಿಕ ದ್ವೇಷವನ್ನು ಬದಿಗೊತ್ತಿ ಬಿಜೆಪಿ ವಿರುದ್ಧ ಕೆಲಸ ಮಾಡಬೇಕೆಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಕುಮಾರ ಸ್ವಾಮಿ ಕರೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರನನ್ನು ಸೋಲಿಸುವ ಉದ್ದೇಶದಿಂದ  ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾಳೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ಉಪ ಚುನಾವಣೆ ಕುಟುಂಬ ರಾಜಕಾರಣಕ್ಕೆ ವೇದಿಕೆಯಾಗಿದೆ, ಆದರೆ ನಮ್ಮ ಕುಟುಂಬದತ್ತ ಬೆರಳು ಮಾಡಿ ತೋರಿಸಲಾಗುತ್ತದೆ, ಆದರೆ ಈ ಚುನಾವಣೆಯಿಂದ ನಾನು ತಪ್ಪಿಸಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ನಂತರ ಕೆಲ ದಿನಗಳ ಕಾಲ ಬೇಸರವಾಗಿತ್ತು, ಆದರೆ ನನ್ನ ತಂದೆಯೇ ಚುನಾವಣೆಯಲ್ಲಿ ಸೋತಿದ್ದರು, ಅದನ್ನೆಲ್ಲವನ್ನು ನಾವು ನುಂಗಿದ್ದೇವೆ ಎಂದು ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಹೇಳಿದ್ದಾರೆ.
Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

20 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

22 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

22 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

23 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

23 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

23 hours ago