ಮಂಗಳೂರು: ವಿಡಿಯೋ ಒಂದರಲ್ಲಿ ಇಬ್ಬರು ವ್ಯಕ್ತಿಗಳು ಬ್ಯಾಗ್ನೊಂದಿಗೆ ಓಡಾಡುತ್ತಿರುವ ದೃಶ್ಯವಿದ್ದು, ಮಂಗಳೂರು ನಗರದಲ್ಲಿ ನಡೆದ ಸ್ಟೋಟ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೆ ಎಂಬುದಾಗಿ ಸುದ್ದಿ ಹರಿದಾಡುತ್ತಿದ್ದು, ಈ ವಿಡಿಯೋಗೂ ಮಂಗಳೂರಿನಲ್ಲಿ ನಡೆದ ಸ್ಟೋಟ ಪ್ರಕರಣಕ್ಕೂ ಸಂಬಂಧವಿರುವುದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಇಬ್ಬರು ವ್ಯಕ್ತಿಗಳು ಓಡಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದನ್ನು ಸ್ಪೋಟ ಪ್ರಕರಣದ ಆರೋಪಿ ಮತ್ತು ಆತನೊಂದಿಗೆ ಇನ್ನೊಬ್ಬ ವ್ಯಕ್ತಿ ಇದ್ದ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಅಸಲಿಗೆ ಆ ವೀಡಿಯೋಗೂ, ಘಟನೆಗೂ ಯಾವುದೇ ಸಂಬಂಧವಿಲ್ಲ. ಅದು ರೈಲು ನಿಲ್ದಾಣದ ಬಳಿಯ ಸ್ಥಳವಾದ್ದರಿಂದ ಯಾರೋ ಪ್ರಯಾಣಿಕರು ಓಡಾಡುತ್ತಿರುವುದನ್ನು ಘಟನೆಯೊಂದಿಗೆ ತಳುಕು ಹಾಕಲಾಗುತ್ತಿದೆ. ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಸಾರ್ವಜನಿಕರು ಪರಿಶೀಲಿಸದ ಇಂತಹ ವೀಡಿಯೋಗಳನ್ನು ನಂಬಬಾರದು ಎಂದವರು ಮನವಿ ಮಾಡಿದ್ದಾರೆ.
📛 ಬೆಂಗಳೂರು: ಬಿಎಂಟಿಸಿ ಬಸ್ ಹರಿದು 15 ವರ್ಷದ ಬಾಲಕಿ ಸಾವು..⏺️ ಅಮ್ಮ-ಮಗನ ಸ್ಥಿತಿ ಗಂಭೀರ – Vishwanews24
ಈ ಘಟನೆ ಬಳಿಕ ಮಂಗಳೂರು ನಗರ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ನಿಗಾ ಇಡಲಾಗುತ್ತಿದೆ. ಧಾರ್ಮಿಕ ಕೇಂದ್ರ, ಮಾಲ್ಗಳು, ಜನನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಶ್ವಾನ ದಳದಿಂದಲೂ ಪರಿಶೀಲನೆ ನಡೆಯಲಿದೆ ಎಂದವರು ತಿಳಿಸಿದರು.
ಘಟನೆಯಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಗೆ ಗಂಭೀರ ಗಾಯಗಳಾಗಿರುವುದರಿಂದ ಚಿಕಿತ್ಸೆ ನಡೆಯುತ್ತಿದೆ. ಸದ್ಯ ಆತ ಮಾತನಾಡುವ ಪರಿಸ್ಥಿತಿಯಲ್ಲಿಲ್ಲದ ಕಾರಣ ಏನೂ ಮಾಹಿತಿಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ಆತ ಚೇತರಿಸಿಕೊಂಡಿರುವ ಬಗ್ಗೆ ವೈದ್ಯರಿಂದ ಅಧಿಕೃತಗೊಂಡ ಬಳಿಕ ಆತನ ವಿಚಾರಣೆ ನಡೆಯಲಿದೆ ಎಂದರು.
📛 ಬಾಂಬ್ ಬ್ಲಾಸ್ಟ್ ಪ್ರಕರಣ : ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…