Featured

ವೈರಲ್ ಆಗಿರುವ ವಿಡಿಯೋಗೂ ಮಂಗಳೂರಿನಲ್ಲಿ ನಡೆದ ಸ್ಟೋಟ ಪ್ರಕರಣಕ್ಕೂ ಸಂಬಂಧವಿಲ್ಲ :- ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ – Vishwanews24

ವೈರಲ್ ಆಗಿರುವ ವಿಡಿಯೋಗೂ ಮಂಗಳೂರಿನಲ್ಲಿ ನಡೆದ  ಸ್ಟೋಟ ಪ್ರಕರಣಕ್ಕೂ ಸಂಬಂಧವಿಲ್ಲ :- ಕಮಿಷನರ್ ಸ್ಪಷ್ಟನೆ

ಮಂಗಳೂರು: ವಿಡಿಯೋ ಒಂದರಲ್ಲಿ ಇಬ್ಬರು ವ್ಯಕ್ತಿಗಳು ಬ್ಯಾಗ್‌ನೊಂದಿಗೆ ಓಡಾಡುತ್ತಿರುವ ದೃಶ್ಯವಿದ್ದು, ಮಂಗಳೂರು ನಗರದಲ್ಲಿ ನಡೆದ ಸ್ಟೋಟ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೆ ಎಂಬುದಾಗಿ ಸುದ್ದಿ ಹರಿದಾಡುತ್ತಿದ್ದು, ಈ ವಿಡಿಯೋಗೂ ಮಂಗಳೂರಿನಲ್ಲಿ ನಡೆದ ಸ್ಟೋಟ ಪ್ರಕರಣಕ್ಕೂ ಸಂಬಂಧವಿರುವುದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ‌ಇಬ್ಬರು ವ್ಯಕ್ತಿಗಳು ಓಡಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದನ್ನು ಸ್ಪೋಟ ಪ್ರಕರಣದ ಆರೋಪಿ ಮತ್ತು ಆತನೊಂದಿಗೆ ಇನ್ನೊಬ್ಬ ವ್ಯಕ್ತಿ ಇದ್ದ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಅಸಲಿಗೆ ಆ ವೀಡಿಯೋಗೂ, ಘಟನೆಗೂ ಯಾವುದೇ ಸಂಬಂಧವಿಲ್ಲ. ಅದು ರೈಲು ನಿಲ್ದಾಣದ ಬಳಿಯ ಸ್ಥಳವಾದ್ದರಿಂದ ಯಾರೋ ಪ್ರಯಾಣಿಕರು ಓಡಾಡುತ್ತಿರುವುದನ್ನು ಘಟನೆಯೊಂದಿಗೆ ತಳುಕು ಹಾಕಲಾಗುತ್ತಿದೆ. ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಸಾರ್ವಜನಿಕರು ಪರಿಶೀಲಿಸದ ಇಂತಹ ವೀಡಿಯೋಗಳನ್ನು ನಂಬಬಾರದು ಎಂದವರು ಮನವಿ ಮಾಡಿದ್ದಾರೆ.

📛 ಬೆಂಗಳೂರು: ಬಿಎಂಟಿಸಿ ಬಸ್​ ಹರಿದು 15 ವರ್ಷದ ಬಾಲಕಿ ಸಾವು..⏺️ ಅಮ್ಮ-ಮಗನ ಸ್ಥಿತಿ ಗಂಭೀರ – Vishwanews24

ಈ ಘಟನೆ ಬಳಿಕ ಮಂಗಳೂರು ನಗರ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ನಿಗಾ ಇಡಲಾಗುತ್ತಿದೆ. ಧಾರ್ಮಿಕ ಕೇಂದ್ರ, ಮಾಲ್‌ಗಳು, ಜನನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಶ್ವಾನ ದಳದಿಂದಲೂ ಪರಿಶೀಲನೆ ನಡೆಯಲಿದೆ ಎಂದವರು ತಿಳಿಸಿದರು.

ಘಟನೆಯಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಗೆ ಗಂಭೀರ ಗಾಯಗಳಾಗಿರುವುದರಿಂದ ಚಿಕಿತ್ಸೆ ನಡೆಯುತ್ತಿದೆ. ಸದ್ಯ ಆತ ಮಾತನಾಡುವ ಪರಿಸ್ಥಿತಿಯಲ್ಲಿಲ್ಲದ ಕಾರಣ ಏನೂ ಮಾಹಿತಿಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ಆತ ಚೇತರಿಸಿಕೊಂಡಿರುವ ಬಗ್ಗೆ ವೈದ್ಯರಿಂದ ಅಧಿಕೃತಗೊಂಡ ಬಳಿಕ ಆತನ ವಿಚಾರಣೆ ನಡೆಯಲಿದೆ ಎಂದರು.

📛 ಬಾಂಬ್ ಬ್ಲಾಸ್ಟ್ ಪ್ರಕರಣ : ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ – Vishwanews24

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

16 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

16 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

17 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

17 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

17 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

17 hours ago