ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22) ಮೃತ ಯುವತಿ. ಅಂದಹಾಗೆ ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು.
ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ. ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಇನ್ನೂ ಕೆರೆಯ ನೀರಲ್ಲಿ ಅಮೃತ ಉರುಳಿದ ಘಟನೆಯನ್ನು ಅಕ್ಷತಾ ತೋಟದಲ್ಲಿದ್ದ ಗ್ರಾಮಸ್ಥರಿಗೆ ತಿಳಿಸಿದ್ದು ಅರ್ಧ ಗಂಟೆಯಲ್ಲೇ ಕೆರೆಯಿಂದ ಮೃತ ಅಕ್ಷತಾಳನ್ನು ಸ್ಥಳೀಯರೇ ಮೇಲೆ ಎತ್ತಿದ್ದಾರೆ. ಇನ್ನೂ ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರ ಮೃತದೇಹದ ಮೇಲೆ ಅರ್ಧ ಗಂಟೆಯೊಳಗೆ ಉಪ್ಪು ಹಾಕಿ ಮಲಗಿಸಿದರೆ ಬದುಕುತ್ತಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುಳ್ಳು ಸಂದೇಶದಂತೆ ಯುವತಿಯನ್ನು ಬದುಕಿಸಬೇಕು ಅಂತ ಆಕೆಯ ಮೇಲೆ ಉಪ್ಪು ಸುರಿದು ಬದುಕಿಸಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ.
ಘಟನ ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಆಗಮಿಸಿ ಅಮೃತಳ ಶವವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
2nd ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ.. ರಿಸಲ್ಟ್ ನೋಡಲು ಹೀಗೆ ಮಾಡಿ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…