ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22) ಮೃತ ಯುವತಿ. ಅಂದಹಾಗೆ ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು.
ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ. ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಇನ್ನೂ ಕೆರೆಯ ನೀರಲ್ಲಿ ಅಮೃತ ಉರುಳಿದ ಘಟನೆಯನ್ನು ಅಕ್ಷತಾ ತೋಟದಲ್ಲಿದ್ದ ಗ್ರಾಮಸ್ಥರಿಗೆ ತಿಳಿಸಿದ್ದು ಅರ್ಧ ಗಂಟೆಯಲ್ಲೇ ಕೆರೆಯಿಂದ ಮೃತ ಅಕ್ಷತಾಳನ್ನು ಸ್ಥಳೀಯರೇ ಮೇಲೆ ಎತ್ತಿದ್ದಾರೆ. ಇನ್ನೂ ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರ ಮೃತದೇಹದ ಮೇಲೆ ಅರ್ಧ ಗಂಟೆಯೊಳಗೆ ಉಪ್ಪು ಹಾಕಿ ಮಲಗಿಸಿದರೆ ಬದುಕುತ್ತಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುಳ್ಳು ಸಂದೇಶದಂತೆ ಯುವತಿಯನ್ನು ಬದುಕಿಸಬೇಕು ಅಂತ ಆಕೆಯ ಮೇಲೆ ಉಪ್ಪು ಸುರಿದು ಬದುಕಿಸಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ.
ಘಟನ ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಆಗಮಿಸಿ ಅಮೃತಳ ಶವವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
2nd ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ.. ರಿಸಲ್ಟ್ ನೋಡಲು ಹೀಗೆ ಮಾಡಿ – Vishwanews24
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…