ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22) ಮೃತ ಯುವತಿ. ಅಂದಹಾಗೆ ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು.
ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ. ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಇನ್ನೂ ಕೆರೆಯ ನೀರಲ್ಲಿ ಅಮೃತ ಉರುಳಿದ ಘಟನೆಯನ್ನು ಅಕ್ಷತಾ ತೋಟದಲ್ಲಿದ್ದ ಗ್ರಾಮಸ್ಥರಿಗೆ ತಿಳಿಸಿದ್ದು ಅರ್ಧ ಗಂಟೆಯಲ್ಲೇ ಕೆರೆಯಿಂದ ಮೃತ ಅಕ್ಷತಾಳನ್ನು ಸ್ಥಳೀಯರೇ ಮೇಲೆ ಎತ್ತಿದ್ದಾರೆ. ಇನ್ನೂ ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರ ಮೃತದೇಹದ ಮೇಲೆ ಅರ್ಧ ಗಂಟೆಯೊಳಗೆ ಉಪ್ಪು ಹಾಕಿ ಮಲಗಿಸಿದರೆ ಬದುಕುತ್ತಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುಳ್ಳು ಸಂದೇಶದಂತೆ ಯುವತಿಯನ್ನು ಬದುಕಿಸಬೇಕು ಅಂತ ಆಕೆಯ ಮೇಲೆ ಉಪ್ಪು ಸುರಿದು ಬದುಕಿಸಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ.
ಘಟನ ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಆಗಮಿಸಿ ಅಮೃತಳ ಶವವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
2nd ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ.. ರಿಸಲ್ಟ್ ನೋಡಲು ಹೀಗೆ ಮಾಡಿ – Vishwanews24
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…