Featured

ವ್ಯಕ್ತಿಯೋರ್ವ ಹತಾಶನಾದಾಗ ಏನೇನೋ ಮಾತನಾಡಲು ಆರಂಭಿಸುತ್ತಾನೆ , ಈ ವೇಳೆ ದಾರಿ ತಪ್ಪುವುದು ಸಹಜ : ನಳಿನ್‌ ಕುಮಾರ್‌ ವಿರುದ್ದ ಪ್ರಿಯಾಂಕ್ ಖರ್ಗೆ – Vishwanews24

ವ್ಯಕ್ತಿಯೋರ್ವ ಹತಾಶನಾದಾಗ ಏನೇನೋ ಮಾತನಾಡಲು ಆರಂಭಿಸುತ್ತಾನೆ , ಈ ವೇಳೆ ದಾರಿ ತಪ್ಪುವುದು ಸಹಜ : ನಳಿನ್‌ ಕುಮಾರ್‌ ವಿರುದ್ದ ಪ್ರಿಯಾಂಕ್ ಖರ್ಗೆ – Vishwanews24

ಪ್ರಚಾರ ಹಂಬಲದ ಕಾರಣ ಕಾಂಗ್ರೆಸ್‌‌‌‌ ನಾಯಕ ರಾಹುಲ್‌ ಗಾಂಧಿ ಅವರನ್ನು ಡ್ರಗ್‌ ಪೆಡ್ಲರ್‌ ಎಂದು ಹೇಳಿದ್ದಾರೆ..

ಕಲಬುರ್ಗಿ : “ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಹತಾಶೆ ಹಾಗೂ ಪ್ರಚಾರ ಗೀಳಿನ ಕಾರಣದಿಂದ ಕಾಂಗ್ರೆಸ್ ನಾಯಕರ ಮೇಲೆ ವೈಯುಕ್ತಿಕವಾಗಿ ದಾಳಿ ನಡೆಸುತ್ತಿದ್ದಾರೆ” ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರ್ಗಿ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಅವರು ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಓವರ್‌ ಶಾಡೋ ಮಾಡಿದ್ದಾರೆ. ಈ ಕಾರಣದಿಂದ ಪಕ್ಷದಲ್ಲಿ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ನಳಿನ್‌ ಕುಮಾರ್‌ ಅವರಿಗೆ ಹೆಚ್ಚು ಪ್ರಚಾರ ನೀಡುತ್ತಿಲ್ಲ. ಹಾಗಾಗಿ ಪ್ರಚಾರ ಹಂಬಲದ ಕಾರಣ ಕಾಂಗ್ರೆಸ್‌‌‌‌ ನಾಯಕ ರಾಹುಲ್‌ ಗಾಂಧಿ ಅವರನ್ನು ಡ್ರಗ್‌ ಪೆಡ್ಲರ್‌ ಎಂದು ಹೇಳಿದ್ದಾರೆ” ಎಂದಿದ್ದಾರೆ.

“ವ್ಯಕ್ತಿಯೋರ್ವ ಹತಾಶನಾದಾಗ ಏನೇನೋ ಮಾತನಾಡಲು ಆರಂಭಿಸುತ್ತಾನೆ. ಈ ವೇಳೆ ದಾರಿ ತಪ್ಪುವುದು ಸಹಜ. ಕೆಲವೊಂದು ಬಾರಿ ತೀವ್ರ ಹತಾಶೆಯಾದಾಗ ಮದ್ಯಪಾನ ಮಾಡುತ್ತಾರೆ ಅಥವಾ ಡ್ರಗ್‌ ಕೂಡಾ ತೆಗೆದುಕೊಳ್ಳುತ್ತಾರೆ. ಬಹುಶಃ ಕಟೀಲ್‌ ಅವರು ತಲುಪಿಲ್ಲ ಎಂದು ಭಾವಿಸುತ್ತೇನೆ. ಆದರೆ, ಕೆಲವೊಂದು ಬಾರಿ ಅವರು ಮಾತನಾಡುವುದನ್ನು ಕಂಡರೆ” ಅನುವಾನ ವ್ಯಕ್ತವಾಗುತ್ತದೆ ಎಂದು ಹೇಳಿದ್ದಾರೆ.

“ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಡ್ರಗ್ಸ್‌ ದಂಧೆ ಹೆಚ್ಚಾಗುತ್ತಿದೆ. ಮಣಿಪುರ, ಮಧ್ಯಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಗುಜರಾತ್, ಮಧ್ಯಪ್ರದೇಶ ಹಾಗೂ ಪಂಜಾಬ್‌‌ನಲ್ಲಿ ಡ್ರಗ್ಸ್ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಆದರೆ, ಕೇಂದ್ರ ಸರ್ಕಾರ ಆರೋಪಿಗಳ ರಕ್ಷಣೆಗೆ ಮುಂದಾಗಿತ್ತು. ಈ ಬಗ್ಗೆ ಆರ್‌ಎಸ್‌ಎಸ್‌ ಮುಖಂಡ ಮೋಹನ್‌ ಭಾಗವತ್‌ ಅವರೆ ಹೇಳಿಕೆ ನೀಡಿದ್ದರು. ಆದರೆ, ಈ ದಂಧೆಯನ್ನು ತಡೆಯಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಫಲರಾಗಿದ್ದಾರೆ” ಎಂದಿದ್ದಾರೆ

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

15 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

17 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

18 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

18 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

18 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

18 hours ago