Featured

ವ್ಯವಸಾಯಕ್ಕೆಂದು ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದನ್ನು ನಿಲ್ಲಿಸಿ : cm ಸಿದ್ದರಾಮಯ್ಯ – Vishwanews24

ವ್ಯವಸಾಯಕ್ಕೆಂದು ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದನ್ನು ನಿಲ್ಲಿಸಿ : cm ಸಿದ್ದರಾಮಯ್ಯ

ಚಾಮರಾಜನಗರ : ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಪಟ್ಟದ ಗುರುಸ್ವಾಮಿಗಳು, ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ವಹಿಸಿದ್ದರು. ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಜಿಲ್ಲೆಯ ಶಾಸಕರು ಮತ್ತು ನಾಯಕರು ಉಪಸ್ಥಿತರಿದ್ದರು.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago