ಮೈಸೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ, ಉದ್ಯಮಿ, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಸಾವಿಗೆ ಪೇಜಾವರ ಶ್ರೀಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಸ್ ಎಂ ಕೃಷ್ಣ ಅವರು ನನಗೆ ತುಂಬಾ ಆತ್ಮೀಯರು. ರಾಜ್ಯದ ಹಿರಿಯ ರಾಜಕೀಯ ಮುತ್ಸದ್ದಿ ಕೃಷ್ಣರವರ ಅಳಿಯನ ಸಾವು ತುಂಬಾ ವಿಷಾದ ತಂದಿದೆ. ಬಹುದೊಡ್ಡ ಉದ್ಯಮ ನಡೆಸುತ್ತಿದ್ದ, ಎಷ್ಟೋ ಜನರಿಗೆ ಉದ್ಯೋಗ ನೀಡಿದ್ದ ಸಿದ್ಧಾರ್ಥ್ ಅವರ ಸಾವು ದುಃಖ ತರಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ವ್ಯವಹಾರದಲ್ಲಿ ಲಾಭ ನಷ್ಟ ಆಗುವುದು ಸಹಜ. ಎಲ್ಲವನ್ನೂ, ಎಲ್ಲಾ ಪರಿಸ್ಥಿತಿಗಳನ್ನೂ ಸಮತೋಲನವಾಗಿ ಕಾಣಬೇಕು. ಇದನ್ನು ಅರಿತು ಯಾವ ಉದ್ಯಮಿಗಳೂ ಈ ರೀತಿ ದುಡುಕಬಾರದು. ಇದು ಅವರಷ್ಟೇ ಅಲ್ಲ, ಅವರನ್ನು ಅವಲಂಬಿಸಿರುವ ಕುಟುಂಬಕ್ಕೂ ನೋವು. ಸಿದ್ಧಾರ್ಥ್ ಅವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ಪ್ರಾರ್ಥಿಸಿದರು.
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…