ನವದೆಹಲಿ: ವ್ಯಾಪಾರಿ ಸಮುದಾಯದ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಕೂಡ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ (ಎಂಎಸ್ಎಂಇ) ಉದ್ಯಮದ ವ್ಯಾಪ್ತಿಗೆ ತರಲಾಗಿದೆ. ಇದು ವ್ಯಾಪಾರಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರವಾಗಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಎಂಎಸ್ಎಂಇ ಉದ್ಯಮದ ವ್ಯಾಪ್ತಿಗೆ ತರಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಘೋಷಿಸಿದ್ದರು. ಇದರಿಂದಾಗಿ ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯದವರಿಗೆ ಕೂಡ ಆರ್ಬಿಐ ಮಾರ್ಗಸೂಚಿ ಅನ್ವಯ ಆದ್ಯತೆಯ ಮೇರೆಗೆ ಸಾಲ ಲಭ್ಯವಾಗಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ‘ನಮ್ಮ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಕೋಟ್ಯಂತರ ವ್ಯಾಪಾರಿಗಳಿಗೆ ಹಣಕಾಸು ಸೌಲಭ್ಯ ಪಡೆಯುವುದು ಸುಲಭವಾಗಲಿದೆ. ಅನೇಕ ಪ್ರಯೋಜನಗಳನ್ನು ಪಡೆಯುವ ಮೂಲಕ ವ್ಯವಹಾರ ಹೆಚ್ಚಿಸಲು ನೆರವಾಗಲಿದೆ. ವ್ಯಾಪಾರಸ್ಥರ ಸಬಲೀಕರಣಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…