Featured

ಶಂಕರನಾರಾಯಣ : ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ – ಹಿಂದೂ ಸಂಘಟನೆಗಳಿಂದ ಆಕ್ಷೇಪ ; ಆಡಳಿತ ಮಂಡಳಿಯಿಂದ ಕ್ಷಮೆ

ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ..

ಹಿಂದೂ ಸಂಘಟನೆಗಳಿಂದ ಆಕ್ಷೇಪ..

ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ  – ಆಡಳಿತ ಮಂಡಳಿ

ಉಡುಪಿ : ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್‌ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾಗಿದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ.

ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟ ಆಯೋಜಿಸಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾಡಿದ ಸ್ವಾಗತ ನೃತ್ಯ ಚರ್ಚೆಗೆ ಕಾರಣವಾಯ್ತು.

ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ – Vishwanews24

ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಹಾಡುಗಳಿಗೆ ವಿದ್ಯಾರ್ಥಿನಿಯರಿಂದ ನೃತ್ಯ ನಡೆದಿದೆ. ಅಲ್ಲಾಹು ಅಕ್ಬರ್‌ಗೆ (ಆಜಾನ್) ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ಸ್ಥಳದಲ್ಲೇ ಆಕ್ಷೇಪ ವ್ಯಕ್ತವಾಯ್ತು. ವೇದಿಕೆಯಲ್ಲಿದ್ದ ಸ್ಥಳೀಯ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದ್ದೆ ಖಂಡನೆ ಮಾಡಿದರು.

ಸ್ಥಳೀಯ ಹಿಂದೂ ಪರ ಸಂಘಟನೆಗಳ ಖಂಡಿಸಿದ್ದು, ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು. ಕ್ಷಮೆ ಯಾಚಿಸದಿದ್ದರೆ ಪ್ರತಿಭಟಿಸುವ ಎಚ್ಚರಿಕೆ ನೀಡಿದರು. ಕೆಲಕಾಲ ಚರ್ಚೆ ನಡೆದು, ಶಾಲಾ ಆಡಳಿತ ಮಂಡಳಿ ವಿಷಾದ ವ್ಯಕ್ತಪಡಿಸಿದೆ.

ಸ್ವಾಗತ ನೃತ್ಯದಲ್ಲಿ 30 ಸೆಕೆಂಡ್ ಆಜಾನ್‌ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದರು, ಆಮೇಲೆ ಕ್ರೈಸ್ತ ಧರ್ಮದ ಬೈಬಲ್‌ ಮತ್ತು ಶ್ಲೋಕಕ್ಕೆ ಹೆಜ್ಜೆ ಹಾಕಿದ್ದರು. ಹಿಂದೂ ಧಾರ್ಮಿಕ ಪದ್ಯಕ್ಕೂ ವಿದ್ಯಾರ್ಥಿಗಳು ಕುಣಿದಿದ್ದರು. ಆಜಾನ್ ಹೆಜ್ಜೆ ಹಾಕಿದ್ದರು. ಯಾರದ್ದೂ ಭಾವನೆಯನ್ನು ಘಾಸಿಗೊಳಿಸಲಾಗಿದೆ ಉದ್ದೇಶ ನಮ್ಮದಾಗಿರಲಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ ಎಂದು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ವಿಷಾದ ವ್ಯಕ್ತಪಡಿಸಿದರು.

ಮಂಗಳೂರು : ಕರಾವಳಿ ದೈವಸ್ಥಾನಗಳಿಗೆ ಕಾಂತಾರ ನಟಿ ಸಪ್ತಮಿ ಗೌಡ..🏵️ ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟಿ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago