Featured

ಶಂಕರನಾರಾಯಣ : ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ – ಹಿಂದೂ ಸಂಘಟನೆಗಳಿಂದ ಆಕ್ಷೇಪ ; ಆಡಳಿತ ಮಂಡಳಿಯಿಂದ ಕ್ಷಮೆ

ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ..

ಹಿಂದೂ ಸಂಘಟನೆಗಳಿಂದ ಆಕ್ಷೇಪ..

ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ  – ಆಡಳಿತ ಮಂಡಳಿ

ಉಡುಪಿ : ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್‌ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾಗಿದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ.

ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟ ಆಯೋಜಿಸಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾಡಿದ ಸ್ವಾಗತ ನೃತ್ಯ ಚರ್ಚೆಗೆ ಕಾರಣವಾಯ್ತು.

ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ – Vishwanews24

ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಹಾಡುಗಳಿಗೆ ವಿದ್ಯಾರ್ಥಿನಿಯರಿಂದ ನೃತ್ಯ ನಡೆದಿದೆ. ಅಲ್ಲಾಹು ಅಕ್ಬರ್‌ಗೆ (ಆಜಾನ್) ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ಸ್ಥಳದಲ್ಲೇ ಆಕ್ಷೇಪ ವ್ಯಕ್ತವಾಯ್ತು. ವೇದಿಕೆಯಲ್ಲಿದ್ದ ಸ್ಥಳೀಯ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದ್ದೆ ಖಂಡನೆ ಮಾಡಿದರು.

ಸ್ಥಳೀಯ ಹಿಂದೂ ಪರ ಸಂಘಟನೆಗಳ ಖಂಡಿಸಿದ್ದು, ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು. ಕ್ಷಮೆ ಯಾಚಿಸದಿದ್ದರೆ ಪ್ರತಿಭಟಿಸುವ ಎಚ್ಚರಿಕೆ ನೀಡಿದರು. ಕೆಲಕಾಲ ಚರ್ಚೆ ನಡೆದು, ಶಾಲಾ ಆಡಳಿತ ಮಂಡಳಿ ವಿಷಾದ ವ್ಯಕ್ತಪಡಿಸಿದೆ.

ಸ್ವಾಗತ ನೃತ್ಯದಲ್ಲಿ 30 ಸೆಕೆಂಡ್ ಆಜಾನ್‌ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದರು, ಆಮೇಲೆ ಕ್ರೈಸ್ತ ಧರ್ಮದ ಬೈಬಲ್‌ ಮತ್ತು ಶ್ಲೋಕಕ್ಕೆ ಹೆಜ್ಜೆ ಹಾಕಿದ್ದರು. ಹಿಂದೂ ಧಾರ್ಮಿಕ ಪದ್ಯಕ್ಕೂ ವಿದ್ಯಾರ್ಥಿಗಳು ಕುಣಿದಿದ್ದರು. ಆಜಾನ್ ಹೆಜ್ಜೆ ಹಾಕಿದ್ದರು. ಯಾರದ್ದೂ ಭಾವನೆಯನ್ನು ಘಾಸಿಗೊಳಿಸಲಾಗಿದೆ ಉದ್ದೇಶ ನಮ್ಮದಾಗಿರಲಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ ಎಂದು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ವಿಷಾದ ವ್ಯಕ್ತಪಡಿಸಿದರು.

ಮಂಗಳೂರು : ಕರಾವಳಿ ದೈವಸ್ಥಾನಗಳಿಗೆ ಕಾಂತಾರ ನಟಿ ಸಪ್ತಮಿ ಗೌಡ..🏵️ ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟಿ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago