Featured

ಶಂಕರಪುರ ಮಲ್ಲಿಗೆಯಂತೆ ಗುರೂಜಿಯ ಸಮಾಜಮುಖಿ‌ ಚಿಂತನೆ ಅಂತರಾಷ್ಟ್ರೀಯವಾಗಿ ಪಸರಿಸಲಿ: ಶಾಸಕ ಲಾಲಾಜಿ‌ ಆರ್ ಮೆಂಡನ್

ಕಾಪು: ಸಿದ್ಧಿ ಸಾಧನೆಯಿಂದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಆಧ್ಯಾತ್ಮಿಕದತ್ತ ತಪೆನಿಷ್ಠೆ ಫಲಿಸಿದ ಘಳಿಗೆಯ ದ್ಯೋತಕವಾಗಿ ಗುರೂಜಿಗೆ ಕರ್ನಾಟಕ ಸಾಯಿ ಬಾಬಾ ಬಿರುದಾಂಕಿತಗೊಂಡಿದೆ ಎಂದು ಸಮಾಜ ಸೇವಕ, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಗುರುವಾರ ಶಂಕರಪುರ ಶ್ರೀ ಸಾಯಿ ಸಾಂತ್ವಾನ ಮಂದಿರ, ಶ್ರೀ ದ್ವಾರಕಾಮಯಿ ಸಾಯಿ ಸಾಂತ್ವಾನ ಮಂದಿರದಲ್ಲಿ ಜರಗಿದ ಹೈದರಾಬಾದ್‍ನ ರೀಚ್ ದ. ಗಾಡ್ ಇವರಿಂದ ಕರ್ನಾಟಕ ಸಾಯಿ ಬಾಬಾ ಬಿರುದಾಂಕಿತ ಗುರೂಜಿ ಸಾಯಿ ಈಶ್ವರ್‍ರವರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕ್ಲಿಷ್ಟಕರ-ಕಷ್ಟಕರ ಸಮಸ್ಯೆಗಳನ್ನು ಶಮನಗೊಳಿಸಿ ಸಂಕಷ್ಟಕ್ಕೊಳಗಾದವರಿಗೆ ಆತ್ಮವಿಶ್ವಾಸ ತುಂಬುವ ಯೋಗ್ಯ ಗುರೂಜಿಗಳ ಮೂಲಕ ಒಳ್ಳೆಯ ಸಮಾಜ ನಿರ್ಮಾಣದ ಕೈಂಕರ್ಯ ಸಾಕಾರಗೊಳ್ಳಲಿ ಎಂದರು.
ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ, ಧಾರ್ಮಿಕ ಕ್ಷೇತ್ರದಲ್ಲಿ ಸಾಯಿ ಸಾಂತ್ವಾನದ ಮೂಲಕ ದೂರದೃಷ್ಟಿತ್ವದ ಸಮಾಜಮುಖಿ ಚಿಂತನೆಯು ಶಂಕರಪುರದ ಮಲ್ಲಿಗೆಯ ಕಂಪಿನಂತೆ ಅಂತಾರಾಷ್ಟ್ರಿ ಯ ಮಟ್ಟದಲ್ಲಿ ಪಸರಿಸಲಿ ಎಂದರು.
ಕೊಡವೂರು ಶ್ರೀ ಶಿರಡಿ ಸಾಯಿಬಾಬ ಮಂದಿರದ ಧರ್ಮದರ್ಶಿ ದಿವಾಕರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಶಶಿಧರ್ ಕುಂದರ್ ಸಾಯಿವಿದ್ಯಾ ಯೋಜನೆಗೆ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ಸಾಯಿವಿದ್ಯಾ ಯೋಜನೆಯನ್ನು ವಿತರಿಸಲಾಯಿತು. ದಾನಿಗಳಿಗೆ ಸಮ್ಮಾನ ನೆರವೇರಿಸಲಾಯಿತು.
ಈ ಸಂದರ್ಭ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟೀ ವಿಶ್ವನಾಥ್ ಸುವರ್ಣ, ಸಾಯಿತುತ್ತು ವಾಹನದ ದಾನಿ ದಯಾನಂದ ಹೆಜ್ಮಾಡಿ, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಎಂ.ಸುವರ್ಣ, ಪಾರಾವಾಸ್ತು ಪೆಂಡೂಲಮ್ ಶಾಸ್ತ್ರಜ್ಞ ಕೆ. ಎನಾರ್ದನ ನಾಯಕ್, ಜೋಗಿ ಸುಧಾರಕ ಸಂಘದ ಅಧ್ಯಕ್ಷ ಕಿರಣ್ ಜೋಗಿ, ವಿಶ್ವಕರ್ಮ ಒಕ್ಕೂಟದ ಗೌರವಾಧ್ಯಕ್ಷ ಅಲೆವೂರು ಯೋಗೀಶ ಆಚಾರ್ಯ, ಮನೋಹರ್ ಶಂಕರಪುರ, ಸಮಾಜ ಸೇವಕ ತಾರಾನಾಥ ಮೇಸ್ತ, ಮಂದಿರದ ಕೋಶಾ„ಕಾರಿ ಜಗದೀಶ್ ಕಾಮತ್, ಉದ್ಯಮಿಗಳಾದ ಆನಂದ ಶೆಟ್ಟಿ, ಎಸ್.ಕೆ.ಜತ್ತನ್ನ, ಈಶ್ವರ ಚಿಟ್ಪಾಡಿ, ಕಲ್ಮಂಜೆ ರಾಘವ ಪೂಜಾರಿ, ಸುಧಾಕರ ಕರ್ಕೇರ ಹೆಜಮಾಡಿ, ಪ್ರಕಾಶ್ ಆಚಾರ್ಯ, ದಿವಾಕರ ಸನಿಲ್, ದಿವಾಕರ ಭಟ್, ಬನ್ನಂಜೆ ದಯಾನಂದ ಭಟ್ ಮೊದಲಾದವರು ವೇದಿಕೆಯಲ್ಲಿದ್ದರು.
ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್ ಅಧ್ಯಕ್ಷ ಸುಧಾಕರ ಶೆಟ್ಟಿ ಸ್ವಾಗತಿಸಿದರು. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago