Featured

ಶಂಕರಪುರ ಮಲ್ಲಿಗೆಯಂತೆ ಗುರೂಜಿಯ ಸಮಾಜಮುಖಿ‌ ಚಿಂತನೆ ಅಂತರಾಷ್ಟ್ರೀಯವಾಗಿ ಪಸರಿಸಲಿ: ಶಾಸಕ ಲಾಲಾಜಿ‌ ಆರ್ ಮೆಂಡನ್

ಕಾಪು: ಸಿದ್ಧಿ ಸಾಧನೆಯಿಂದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಆಧ್ಯಾತ್ಮಿಕದತ್ತ ತಪೆನಿಷ್ಠೆ ಫಲಿಸಿದ ಘಳಿಗೆಯ ದ್ಯೋತಕವಾಗಿ ಗುರೂಜಿಗೆ ಕರ್ನಾಟಕ ಸಾಯಿ ಬಾಬಾ ಬಿರುದಾಂಕಿತಗೊಂಡಿದೆ ಎಂದು ಸಮಾಜ ಸೇವಕ, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಗುರುವಾರ ಶಂಕರಪುರ ಶ್ರೀ ಸಾಯಿ ಸಾಂತ್ವಾನ ಮಂದಿರ, ಶ್ರೀ ದ್ವಾರಕಾಮಯಿ ಸಾಯಿ ಸಾಂತ್ವಾನ ಮಂದಿರದಲ್ಲಿ ಜರಗಿದ ಹೈದರಾಬಾದ್‍ನ ರೀಚ್ ದ. ಗಾಡ್ ಇವರಿಂದ ಕರ್ನಾಟಕ ಸಾಯಿ ಬಾಬಾ ಬಿರುದಾಂಕಿತ ಗುರೂಜಿ ಸಾಯಿ ಈಶ್ವರ್‍ರವರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕ್ಲಿಷ್ಟಕರ-ಕಷ್ಟಕರ ಸಮಸ್ಯೆಗಳನ್ನು ಶಮನಗೊಳಿಸಿ ಸಂಕಷ್ಟಕ್ಕೊಳಗಾದವರಿಗೆ ಆತ್ಮವಿಶ್ವಾಸ ತುಂಬುವ ಯೋಗ್ಯ ಗುರೂಜಿಗಳ ಮೂಲಕ ಒಳ್ಳೆಯ ಸಮಾಜ ನಿರ್ಮಾಣದ ಕೈಂಕರ್ಯ ಸಾಕಾರಗೊಳ್ಳಲಿ ಎಂದರು.
ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ, ಧಾರ್ಮಿಕ ಕ್ಷೇತ್ರದಲ್ಲಿ ಸಾಯಿ ಸಾಂತ್ವಾನದ ಮೂಲಕ ದೂರದೃಷ್ಟಿತ್ವದ ಸಮಾಜಮುಖಿ ಚಿಂತನೆಯು ಶಂಕರಪುರದ ಮಲ್ಲಿಗೆಯ ಕಂಪಿನಂತೆ ಅಂತಾರಾಷ್ಟ್ರಿ ಯ ಮಟ್ಟದಲ್ಲಿ ಪಸರಿಸಲಿ ಎಂದರು.
ಕೊಡವೂರು ಶ್ರೀ ಶಿರಡಿ ಸಾಯಿಬಾಬ ಮಂದಿರದ ಧರ್ಮದರ್ಶಿ ದಿವಾಕರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಶಶಿಧರ್ ಕುಂದರ್ ಸಾಯಿವಿದ್ಯಾ ಯೋಜನೆಗೆ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ಸಾಯಿವಿದ್ಯಾ ಯೋಜನೆಯನ್ನು ವಿತರಿಸಲಾಯಿತು. ದಾನಿಗಳಿಗೆ ಸಮ್ಮಾನ ನೆರವೇರಿಸಲಾಯಿತು.
ಈ ಸಂದರ್ಭ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟೀ ವಿಶ್ವನಾಥ್ ಸುವರ್ಣ, ಸಾಯಿತುತ್ತು ವಾಹನದ ದಾನಿ ದಯಾನಂದ ಹೆಜ್ಮಾಡಿ, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಎಂ.ಸುವರ್ಣ, ಪಾರಾವಾಸ್ತು ಪೆಂಡೂಲಮ್ ಶಾಸ್ತ್ರಜ್ಞ ಕೆ. ಎನಾರ್ದನ ನಾಯಕ್, ಜೋಗಿ ಸುಧಾರಕ ಸಂಘದ ಅಧ್ಯಕ್ಷ ಕಿರಣ್ ಜೋಗಿ, ವಿಶ್ವಕರ್ಮ ಒಕ್ಕೂಟದ ಗೌರವಾಧ್ಯಕ್ಷ ಅಲೆವೂರು ಯೋಗೀಶ ಆಚಾರ್ಯ, ಮನೋಹರ್ ಶಂಕರಪುರ, ಸಮಾಜ ಸೇವಕ ತಾರಾನಾಥ ಮೇಸ್ತ, ಮಂದಿರದ ಕೋಶಾ„ಕಾರಿ ಜಗದೀಶ್ ಕಾಮತ್, ಉದ್ಯಮಿಗಳಾದ ಆನಂದ ಶೆಟ್ಟಿ, ಎಸ್.ಕೆ.ಜತ್ತನ್ನ, ಈಶ್ವರ ಚಿಟ್ಪಾಡಿ, ಕಲ್ಮಂಜೆ ರಾಘವ ಪೂಜಾರಿ, ಸುಧಾಕರ ಕರ್ಕೇರ ಹೆಜಮಾಡಿ, ಪ್ರಕಾಶ್ ಆಚಾರ್ಯ, ದಿವಾಕರ ಸನಿಲ್, ದಿವಾಕರ ಭಟ್, ಬನ್ನಂಜೆ ದಯಾನಂದ ಭಟ್ ಮೊದಲಾದವರು ವೇದಿಕೆಯಲ್ಲಿದ್ದರು.
ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್ ಅಧ್ಯಕ್ಷ ಸುಧಾಕರ ಶೆಟ್ಟಿ ಸ್ವಾಗತಿಸಿದರು. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

8 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

8 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

8 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

9 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

9 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 hours ago