ಶಂಕರಪುರ ಸಾಯಿಬಾಬಾ ಮಂದಿರ ವತಿಯಿಂದ ಕರೋನ ಜಾಗೃತಿಗಾಗಿ ಪ್ರಚಾರ ವಾಹನ ಉದ್ಘಾಟನೆ.
ಕಾಪು: ಶಂಕರಪುರ ಸಾಯಿ ಸಾಂತ್ವನ ಮಂದಿರದ ಧರ್ಮಧರ್ಶಿ ಗುರೂಜಿ ಸಾಯಿಈಶ್ವರ್ ಇವರ ಮುತುವರ್ಜಿಯಿಂದ ದ್ವಾರಕಾಮಾಹಿ ಸಾಯಿ ಬಾಬಾ ಮಂದಿರದಿಂದ ಕೋವಿಡ್ 19 ಬಗ್ಗೆ ಜನಜಾಗೃತಿಗಾಗಿ ವಾಹನ ಪ್ರಚಾರವನ್ನು ಗುರುವಾರ ಕಾಪು ಶಾಸಕರಾದ ಲಾಲಾಜಿ ಮೆಂಡನ್ ಚಾಲನೆಗೊಳಿಸಿದರು.
ತದನಂತರ ಕಾರ್ಯಕ್ರಮ ಉದ್ದೇಶಿಸಿ ಮಾತಾಡಿ” ಜಿಲ್ಲೆಯಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರು ಗುರೂಜಿ ಸಾಯಿ ಈಶ್ವರ್ ಅವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದ್ದು ಕೊರೋನಾದಂತಹ ಈ ಸಂಧರ್ಭದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರಚಾರ ವಾಹನ ಚಾಲನೆ ಮಾಡಿರುವುದು ಅತ್ಯಂತ ಅಭಿನಂದನೀಯ ಎಂದರು.
ಕೊರೋನಾದಂತಹ ಲಾಕ್-ಡೌನ್ ಸಮಯದಲ್ಲಿ ಮಂದಿರದ ವತಿಯಿಂದ ಊಟೋಪಚಾರ ಹಾಗೂ ಕಿಟ್ ವಿತರಿಸುವ ಕಾರ್ಯ ಮಾಡಿದ್ದರು ಎಂದರು.
ಇದು ದ್ವಾರಕಾಮಾಹಿ ಶ್ರೀ ಸಾಯಿ ಬಾಬಾ ಮಂದಿರದ ವತಿಯಿಂದ ನಡೆಯುವ ರಾಜ್ಯದ ಪ್ರಥಮ ಕೋವಿಡ್ ೧೯ ಜಾಗೃತಿ ಪ್ರಚಾರ ವಾಹನವಾಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯರಾದ ಗೀತಾಂಜಲಿ ಸುವರ್ಣ, ಗ್ರಾಮ.ಪಂ. ಸದಸ್ಯರಾದ ಅಶೋಕ್ ರಾವ್,ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ವೀಣಾ ಶೆಟ್ಟಿ, ಸಾಯಿ ಮಂದಿರದ ಟ್ರಸ್ಟಿ ವಿಶ್ವನಾಥ ಸುವರ್ಣ ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…