ಶಂಕರಪುರ ಸಾಯಿಬಾಬಾ ಮಂದಿರ ವತಿಯಿಂದ ಕರೋನ ಜಾಗೃತಿಗಾಗಿ ಪ್ರಚಾರ ವಾಹನ ಉದ್ಘಾಟನೆ.
ಕಾಪು: ಶಂಕರಪುರ ಸಾಯಿ ಸಾಂತ್ವನ ಮಂದಿರದ ಧರ್ಮಧರ್ಶಿ ಗುರೂಜಿ ಸಾಯಿಈಶ್ವರ್ ಇವರ ಮುತುವರ್ಜಿಯಿಂದ ದ್ವಾರಕಾಮಾಹಿ ಸಾಯಿ ಬಾಬಾ ಮಂದಿರದಿಂದ ಕೋವಿಡ್ 19 ಬಗ್ಗೆ ಜನಜಾಗೃತಿಗಾಗಿ ವಾಹನ ಪ್ರಚಾರವನ್ನು ಗುರುವಾರ ಕಾಪು ಶಾಸಕರಾದ ಲಾಲಾಜಿ ಮೆಂಡನ್ ಚಾಲನೆಗೊಳಿಸಿದರು.
ತದನಂತರ ಕಾರ್ಯಕ್ರಮ ಉದ್ದೇಶಿಸಿ ಮಾತಾಡಿ” ಜಿಲ್ಲೆಯಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರು ಗುರೂಜಿ ಸಾಯಿ ಈಶ್ವರ್ ಅವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದ್ದು ಕೊರೋನಾದಂತಹ ಈ ಸಂಧರ್ಭದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರಚಾರ ವಾಹನ ಚಾಲನೆ ಮಾಡಿರುವುದು ಅತ್ಯಂತ ಅಭಿನಂದನೀಯ ಎಂದರು.
ಕೊರೋನಾದಂತಹ ಲಾಕ್-ಡೌನ್ ಸಮಯದಲ್ಲಿ ಮಂದಿರದ ವತಿಯಿಂದ ಊಟೋಪಚಾರ ಹಾಗೂ ಕಿಟ್ ವಿತರಿಸುವ ಕಾರ್ಯ ಮಾಡಿದ್ದರು ಎಂದರು.
ಇದು ದ್ವಾರಕಾಮಾಹಿ ಶ್ರೀ ಸಾಯಿ ಬಾಬಾ ಮಂದಿರದ ವತಿಯಿಂದ ನಡೆಯುವ ರಾಜ್ಯದ ಪ್ರಥಮ ಕೋವಿಡ್ ೧೯ ಜಾಗೃತಿ ಪ್ರಚಾರ ವಾಹನವಾಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯರಾದ ಗೀತಾಂಜಲಿ ಸುವರ್ಣ, ಗ್ರಾಮ.ಪಂ. ಸದಸ್ಯರಾದ ಅಶೋಕ್ ರಾವ್,ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ವೀಣಾ ಶೆಟ್ಟಿ, ಸಾಯಿ ಮಂದಿರದ ಟ್ರಸ್ಟಿ ವಿಶ್ವನಾಥ ಸುವರ್ಣ ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…