ಮೈಸೂರು : ”ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್ ಜನ ಪ್ರಿಯತೆ ಪಡೆಯಬೇಕಾದರೆ ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು” ಎಂದು ಕಾಂಗ್ರೆಸ್ ಪಕ್ಷದ ಮುಖಂಡ, ವಿಧಾನಪರಿಷತ್ ಸದಸ್ಯ ಆರ್ ಧರ್ಮಸೇನಾ ಹೇಳಿದ್ದಾರೆ.
ಕ್ವಿಟ್ ಇಂಡಿಯಾ ಚಳವಳಿಯ ವರ್ಷದ ಅಂಗವಾಗಿ ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ವರ್ಷಾಚರಣೆಯಲ್ಲಿ ಮಾತನಾಡಿದ ಅವರು, ”ಕಾಂಗ್ರೆಸ್ ಬದಲಾಗಬೇಕಿದೆ. ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್ ಈಗೀನ ಕಾಲದಲ್ಲಿ ಜನಪ್ರಿಯತೆ ಗಳಿಸಬೇಕಾದರೆ ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು” ಎಂದು ಹೇಳಿದರು.
”ಕಾಂಗ್ರೆಸ್ ಹಿಂದೂಗಳ ಹಿತದೃಷ್ಟಿಯಿಂದ ಬಹಳಷ್ಟು ಕೊಡುಗೆ ನೀಡಿದೆ. ನಾವು ಮಾಜಿ ಮಾಜಿ ಕೇಂದ್ರ ಸಚಿವ ಬಾಬು ಜಗಜೀವನ ರಾಮ್ ಮತಾಂತರವಾಗುವುದನ್ನು ತಡೆದಿದ್ದೆವು. ಪಕ್ಷ ಹಿಂದೂಗಳ ಹಿತದೃಷ್ಟಿಗಾಗಿ ನೀಡಿರುವ ಕೊಡುಗೆ ನೆನಪಿಸಲು ಹಿಂದೂ ಕೋಶವೊಂದನ್ನು ಸ್ಥಾಪಿಸಬೇಕಾಗಿದೆ” ಎಂದರು.
”ಹಾಗೆಯೇ ಪ್ರತಿ 10 ವರ್ಷಗಳಿಗೊಮ್ಮೆ ರಾಜಕೀಯ ಪರಿಸ್ಥಿತಿ ಬದಲಾವಣಿಯಾಗಲಿದ್ದು ಜನಸಂಘ ಮೊದಲಾದ ಕಾರಣದಿಂದ ಬಿಜೆಪಿ ಹೆಚ್ಚು ಪ್ರಬಲವಾಗಿದೆ. ಎಲ್ಲಾ ಪಕ್ಷಗಳಿಗೂ ಬದಲಾವಣೆ ಅನಿವಾರ್ಯ. ನಾವು ಕೂಡಾ ಬದಲಾವಣೆಯಾಗಬೇಕು” ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…