ಬೆಂಗಳೂರು : ಕೊರೋನಾದಿಂದಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಐತಿಹಾಸಿಕ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಶತಮಾನಗಳ ನಂತರ ಮತ್ತೆ ಅಯೋಧ್ಯೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ ನಡೆಯಲಿದೆ. ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ಭಾರತೀಯರ ಪರಮ ಪವಿತ್ರ ಶ್ರದ್ಧಾಕೇಂದ್ರ ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗಲಿದ್ದು, ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ
ಅಗಣಿತ ಸಾಧು-ಸಂತರ, ಶ್ರದ್ಧಾಳುಗಳ ತಪಸ್ಸು, ಪರಿಶ್ರಮ, ಬಲಿದಾನ, ಪ್ರಾರ್ಥನೆಗಳು ಸಾಕಾರಗೊಳ್ಳುವ ಸಮಯ ಬಂದಿದೆ. ಜನಾಂದೋಲನಗಳಲ್ಲಿ ಪಾಲ್ಗೊಂಡು, ಅನೇಕ ರೀತಿಯ ಸವಾಲುಗಳನ್ನು ಎದುರಿಸಿ, ಹೋರಾಟಗಳನ್ನು ಮಾಡಿದ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ಪ್ರಯತ್ನಗಳನ್ನು ಸ್ಮರಿಸುತ್ತಾ, ಈ ಹೆಮ್ಮೆಯ ಐತಿಹಾಸಿಕ ಕ್ಷಣವನ್ನು ಸ್ವಾಗತಿಸೋಣ ಎಂದು ಟ್ವೀಟ್ ಮಾಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…