ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್ ರೈಲು ನಿಲ್ದಾಣದಲ್ಲಿ ಶತಾಬ್ದಿ ಎಕ್ಸ್ಪ್ರೆಸ್ನ ಲಗ್ಗೇಜ್ ಬೋಗಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನವದೆಹಲಿ-ಲಖನೌ ಶತಾಬ್ದಿ ಎಕ್ಸ್ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತರಾಗಿದ್ದು, ಯಾರೂ ಗಾಯಗೊಂಡಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಉಡುಪಿ : ಪೋಷಣ್ ಪಕ್ವಾಡ ಅಭಿಯಾನ್ ಯೋಜನೆಯ ಆಯುಷ್ ಅರಿವು ಕಾರ್ಯಕ್ರಮ -Vishwanews24
ಶತಾಬ್ದಿ ಎಕ್ಸ್ಪ್ರೆಸ್ ಶನಿವಾರ ಬೆಳಗ್ಗೆ 6.41ರ ಹೊತ್ತಿಗೆ ಗಾಜಿಯಾಬಾದ್ ನಿಲ್ದಾಣಕ್ಕೆ ತಲುಪಿತ್ತು. ಬೆಂಕಿ ಅವಘಡದ ಬೆನ್ನಲ್ಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ನೆರವಾದರು.
ಬೆಂಕಿ ಹೊತ್ತಿಕೊಂಡಿರುವ ಬೋಗಿಯನ್ನು ಬೇರ್ಪಡಿಸಿದ ಬಳಿಕ 8.20ರ ಸುಮಾರಿಗೆ ರೈಲು ತನ್ನ ಗಮ್ಯಸ್ಥಾನಕ್ಕೆ ಪ್ರಯಾಣವನ್ನು ಬೆಳೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ದೆಹಲಿಯಿಂದ ಡೆಹ್ರಾಡೂನ್ಗೆ ಸಂಪರ್ಕ ಕಲ್ಪಿಸುವ ಶತಾಬ್ದಿ ಎಕ್ಸ್ಪ್ರೆಸ್ ರೈಲು ಉತ್ತರಾಖಂಡದ ಕಾನ್ಸ್ರೋ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಬೋಗಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿತ್ತು.
ಇದನ್ನೂ ಓದಿ : ಉಡುಪಿ : ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆಗೆ ಈ ಬಾರಿಯೂ ಮೊದಲನೇ ಸ್ಥಾನ ಬರಲಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…