Featured

ಶಬರಿಮಲೆಗೆ ಮಹಿಳೆಯರ ಪ್ರವೇಶ ದೇವರಿಗೆ ವಿರುದ್ಧವಾಗಿದೆ- ವಿದ್ವಾನ್ ಅನಂತ್ ಶರ್ಮಾ

ಬೆಂಗಳೂರು: ಮಹಿಳೆಯರು ದೇವಸ್ಥಾನವನ್ನು ಪ್ರವೇಶ ಮಾಡಬಾರದು ಎಂಬುದು ಹಿಂದೂ ಸಂಪ್ರದಾಯದಲ್ಲಿ ಎಲ್ಲೂ ಇಲ್ಲ. ಆದ್ರೆ ಅಯ್ಯಪ್ಪನ ಮಂದಿರಕ್ಕೆ ಯಾಕೆ ಮಹಿಳೆಯರಿಗೆ ನಿಷೇಧ ಯಾಕೆ ಎನ್ನುವುದು ಇದೀಗ ಪ್ರಶ್ನೆಯಾಗಿದೆ. ಅಯ್ಯಪ್ಪ ಸ್ವಾಮಿ ಬ್ರಹ್ಮಚರಿಯಾಗಿ ಇರುವ ಕಾರಣ ಮಹಿಳೆಯರು ಹೋದರೆ ಅಯ್ಯಪ್ಪ ಸ್ವಾಮಿಗೆ ತೊಂದರೆಯಾಗಬಹುದು. ಒಬ್ಬ ಬ್ರಹ್ಮಚರಿಯಾದವನಿಗೆ ಹೀಗೆಯೇ ನಡೆದುಕೊಳ್ಳಬೇಕು ಎನ್ನುವ ನಿಯಮಗಳಿರುತ್ತವೆ. ಒಟ್ಟಿನಲ್ಲಿ ಸಂಪ್ರದಾಯಕ್ಕೆ ಭಂಗ ಮಾಡುವುದರಿಂದ ದೇವಸ್ಥಾನಕ್ಕೆ ತೊಂದರೆಯಾಗಬಹುದು ಎಂದು ವಿದ್ವಾನ್ ಅನಂತ್ ಶರ್ಮಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಋಗ್ವೇದ, ಯಜುರ್ವೇದ, ಸಾಮವೇದ ಮತ್ತು ಅಥರ್ವಣವೇದವನ್ನು ಪ್ರಭುಸಂಹಿತೆ ಅಂತ ಹೇಳುತ್ತೇವೆ. ಹಾಗೆಯೇ ಕೆಲವೊಂದು ಶಾಸ್ತ್ರಗಳಿವೆ. ಅವುಗಳನ್ನು ಮಿತ್ರ ಸಂಹಿತ, ಕಾವ್ಯಗಳನ್ನು ಕಾಂತಾ ಸಂಹಿತಾ ಅಂತ ಕರೆಯುತ್ತೇವೆ. ಈ ಮೂರನ್ನು ಇಟ್ಟುಕೊಂಡು ನಾವು ಜೀವನ ಮಾಡಬೇಕಿದೆ.

ಎರಡು ದೇವತೆಗಳ ಶಕ್ತಿಯ ಮಿಶ್ರಣದಿಂದ ಉದ್ಭವಾಗಿರುವ ಈ ದೇವರು ಬ್ರಹ್ಮಚಾರಿ ಎನ್ನುವ ಸ್ವರೂಪವಿದೆ. ಹಾಗಿರುವ ಕಾರಣದಿಂದ ಹಿಂದಿನ ಸಂಪ್ರದಾಯದಿಂದ ಬಂದಂತಹ ಕ್ರಮದಲ್ಲಿ ಋತುಮತಿಯಾದ ಸ್ತ್ರೀಯರು ದೇವರನ್ನು ನೋಡಬಾರದೆಂಬ ಪ್ರತೀತಿ ಇದೆ.

ಅದೇ ರೀತಿಯಾಗಿ ಸ್ತ್ರೀಯರಿಗೆ ದೇವಾಲಯ ಪ್ರವೇಶ ನಿರ್ಬಂಧ ಎನ್ನುವುದು ಶಾಸ್ತ್ರದಲ್ಲಿ ಎಲ್ಲೂ ಉಲ್ಲೇಖವಾಗಿಲ್ಲ. ಆದ್ರೆ ಸಂಪ್ರದಾಯದಲ್ಲಿ ಉಲ್ಲೇಖವಿದೆ. ಈ ಮಿತ್ರ ಸಂಹಿತೆ ಎನ್ನುವುದು ಶಾಸ್ತ್ರ ಆಗಿರೋದ್ರಿಂದ, ಇದರಲ್ಲಿ ಸಂಪ್ರದಾಯ ಹಾಗೂ ಶಾಸ್ತ್ರ ಎರಡನ್ನೂ ಸೇರಿಸಿಕೊಂಡು ನಾವು ಮಂದೆ ಹೋಗಬೇಕಾಗಿದೆ.

ಈ ಆಚರಣೆ ಹಿಂದಿನಿಂದ ಬಂದಿರುವಂತಹ ಒಂದು ಸಮಂಜಸವಾದ ಕ್ರಮ. ಅದರ ಬಗ್ಗೆ ನಾವು ಮಾತನಾಡಲು ಸಾಧ್ಯವಿಲ್ಲ. ಯಾಕಂದ್ರೆ ಶಾಸ್ತ್ರದ ದೃಷ್ಟಿಯಿಂದ ಕುಲ ಮತ್ತು ದೇಶ ಆಚಾರ ಧರ್ಮವನ್ನು ಉಲ್ಲಂಘನೆ ಮಾಡಬಾರದು ಅಂತ ಪುರಾಣದಲ್ಲಿದೆ. ಶಾಸ್ತ್ರದಲ್ಲಿ ಹೇಳಿರುವುದರಿಂದ ಆ ಸಂಪ್ರದಾಯವನ್ನೇ ಪಾಲಿಸಿಕೊಂಡು ಮುಂದುವರಿಯಬೇಕಾಗಿದೆ ಅಂತ ಹೇಳಿದರು.

ಇದೀಗ ಒಂದು ತೀರ್ಪು ಬಂದಿದೆ. ಯಾಕಂದ್ರೆ ಅದನ್ನು ಕಾನೂನು ತಜ್ಞರೇ ನೋಡಿಕೊಳ್ಳಬೇಕು. ಇಲ್ಲಿ ಮಹಿಳೆಯರಿಗೆ ಎನಾದ್ರೂ ಆಗುತ್ತೆ ಅಂತ ಅಲ್ಲ, ದೇವರಿಗೆ ತೊಂದರೆ ಆಗಲ್ಲ, ಆದ್ರೆ ದೇವರಿಗೆ ಇದು ಸಮಂಜಸವಲ್ಲ ಎಂದು ಅವರು ಪ್ರತಿಕ್ರಿಯಿಸಿದರು.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

10 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

13 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

13 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

14 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

14 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

14 hours ago