ಶಬರಿಮಲೆಗೆ ಮಹಿಳೆಯರ ಪ್ರವೇಶ: ಪುನರ್ ಪರಿಶೀಲನೆಗೆ ಸುಪ್ರೀಂಗೆ ಮನವಿ ಸಲ್ಲಿಸಿದ ಮಹಿಳೆ
ಹೊಸದಿಲ್ಲಿ, : ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಒಕ್ಕೂಟದ ಅಧ್ಯಕ್ಷೆ ಶೈಲಜಾ ವಿಜಯನ್ ಸೋಮವಾರ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ಸೆಪ್ಟೆಂಬರ್ 28ರಂದು ತೀರ್ಪು ನೀಡಿತ್ತು. ಪುನರ್ ಪರಿಶೀಲನೆಗೆ ಅರ್ಜಿ ಸಲ್ಲಿಸುವಂತೆ ಸರಕಾರಕ್ಕೆ ಹಲವು ಸಂಘಟನೆಗಳು ಮನವಿ ಮಾಡಿತ್ತು. ಆದರೆ ಕೇರಳ ಸರಕಾರ ನ್ಯಾಯಾಲಯದ ತೀರ್ಪು ಪುನರ್ ಪರಿಶೀಲನೆಗೆ ಅರ್ಜಿ ಸಲ್ಲಿಸುವುದಿಲ್ಲ.ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸುವುದಾಗಿ ಹೇಳಿದೆ.
ಸರಕಾರದ ನಿಲುವನ್ನು ಪ್ರಶ್ನಿಸಿ ಕೇರಳ ಸೇರಿದಂತೆ ಹಲವಡೆ ಪ್ರತಿಭಟನೆ ಕಂಡು ಬಂದಿದೆ. ಕೇರಳದ ಹಲವಡೆ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಭಟನೆಯನ್ನು ಮುಂದುವರಿಸಿದೆ.

