ಹೊಸದಿಲ್ಲಿ, : ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಒಕ್ಕೂಟದ ಅಧ್ಯಕ್ಷೆ ಶೈಲಜಾ ವಿಜಯನ್ ಸೋಮವಾರ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ಸೆಪ್ಟೆಂಬರ್ 28ರಂದು ತೀರ್ಪು ನೀಡಿತ್ತು. ಪುನರ್ ಪರಿಶೀಲನೆಗೆ ಅರ್ಜಿ ಸಲ್ಲಿಸುವಂತೆ ಸರಕಾರಕ್ಕೆ ಹಲವು ಸಂಘಟನೆಗಳು ಮನವಿ ಮಾಡಿತ್ತು. ಆದರೆ ಕೇರಳ ಸರಕಾರ ನ್ಯಾಯಾಲಯದ ತೀರ್ಪು ಪುನರ್ ಪರಿಶೀಲನೆಗೆ ಅರ್ಜಿ ಸಲ್ಲಿಸುವುದಿಲ್ಲ.ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸುವುದಾಗಿ ಹೇಳಿದೆ.
ಸರಕಾರದ ನಿಲುವನ್ನು ಪ್ರಶ್ನಿಸಿ ಕೇರಳ ಸೇರಿದಂತೆ ಹಲವಡೆ ಪ್ರತಿಭಟನೆ ಕಂಡು ಬಂದಿದೆ. ಕೇರಳದ ಹಲವಡೆ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಭಟನೆಯನ್ನು ಮುಂದುವರಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…