ರಾಷ್ಟ್ರ ನ್ಯೂಸ್

ಶಬರಿಮಲೆಗೆ ಮಹಿಳೆಯರ ಪ್ರವೇಶ : ದೇಗುಲ ಪ್ರವೇಶಕ್ಕೆ ಇರುವ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರೂ ಹಸ್ತಕ್ಷೇಪ ಮಾಡಬಾರದು :ಸೂಪರ್‌ ಸ್ಟಾರ್‌ ರಜನಿಕಾಂತ್

ಚೆನ್ನೈ: ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ ಇರುವ ವಯಸ್ಸಿನ ಮಿತಿಯ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರೂ ಹಸ್ತಕ್ಷೇಪ ಮಾಡಬಾರದೆಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿಕೊಟ್ಟಿದ್ದರ ಬಗ್ಗೆ ಇದೇ ಮೊದಲ ಬಾರಿಗೆ ನಟ ರಜನಿಕಾಂತ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಅನಾದಿಕಾಲದಿಂದಲೂ ನಮ್ಮ ಸಮಾಜದಲ್ಲಿ ಆಚರಣೆಗಳನ್ನು ನಾವು ಕಟ್ಟುನಿಟ್ಟಾಗಿ ನಡೆಸಿಕೊಂಡು ಬಂದಿದ್ದೇವೆ. ಹೀಗಾಗಿ ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿದರು.

ನಮ್ಮ ದೇಶದಲ್ಲಿರುವ ಪ್ರತಿಯೊಂದು ದೇವಾಲಗಳು ಸಹ, ತನ್ನದೇ ಆದ ರೂಢಿ-ಸಂಪ್ರದಾಯಗಳನ್ನು ಬೆಳೆಸಿಕೊಂಡು ಬಂದಿರುತ್ತವೆ. ವಿಶೇಷವಾಗಿ ಸ್ವಾಮಿ ಶಬರಿಮಲೆ ಅಯ್ಯಪ್ಪ ದೇಗುಲ ವಿಚಾರದಲ್ಲಿಯೂ ಸಹ ಅನೇಕ ಸಂಪ್ರದಾಯಗಳು ರೂಢಿಯಲ್ಲಿವೆ. ಹೀಗಾಗಿ ಶಬರಿಮಲ ದೇವಾಲಯಕ್ಕೆ ಮಹಿಳೆಯರ ಪ್ರವೇಶದ ವಯಸ್ಸಿನ ವಿಚಾರಕ್ಕೆ ವಿಧಿಸಿರುವ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರು ಸಹ ಹಸ್ತಕ್ಷೇಪ ಮಾಡಬಾರದೆಂಬುದು ನನ್ನ ಮನವಿ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಶಬರಿಮಲೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ತಲೆ ಬಾಗುತ್ತೇನೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ನಾನು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇನೆ. ಆದರೆ ಇದು ಧರ್ಮ ಹಾಗೂ ಅದಕ್ಕೆ ಸಂಬಂಧಪಟ್ಟ ಆಚರಣೆಗಳ ವಿಷಯಕ್ಕೆ ಬಂದಾಗ ಎಲ್ಲರೂ ಎಚ್ಚರ ವಹಹಿಸಬೇಕಾಗುತ್ತದೆ ಎಂದು ಸ್ಪಷ್ಟನೆ ನೀಡಿದರು..

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago