ಶಾರ್ಜಾ:ಮಹಿಳೆಯರಿಗೆ ದೇವರನ್ನು ನೋಡಲು, ಪೂಜೆ ಮಾಡುವ ಅವಕಾಶ ನೀಡದ ಎಲ್ಲಾ ಧರ್ಮವನ್ನು ತಾನು ಗೌರವಿಸುವುದಿಲ್ಲ. ಮಹಿಳೆಯರನ್ನು ನೋಡದ ದೇವರು ತನಗೆ ದೇವರೇ ಅಲ್ಲ ಎಂದು ನಟ ಪ್ರಕಾಶ್ ರೈ ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿಷಯ ಕುರಿತಂತೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಮಹಿಳೆಯರನ್ನು ನೋಡದ ದೇವರು ದೇವರೇ ಅಲ್ಲ ಎಂದು ಹೇಳುವ ಮೂಲಕ ನಟ ಪ್ರಕಾಶ್ ರೈ ವಿವಾದದ ಸುಳಿಯಲ್ಲಿ ಸಿಲುಕೊಂಡಿದ್ದಾರೆ
ಮಹಿಳೆಯರಿಗೆ ಪೂಜೆ ಮಾಡಲು ಅವಕಾಶ ನೀಡದ ದೇವರು ಮತ್ತು ಭಕ್ತರನ್ನು ತಾನು ನಂಬುವುದಿಲ್ಲ. ಎಲ್ಲರೂ ಜನಿಸುವುದು ಹೆಣ್ಣಿನಿಂದಲೇ. ಹೀಗಾಗಿ ಮಹಿಳೆಗೆ ಪ್ರವೇಶಿಸುವ ಅವಕಾಶವನ್ನು ನಿರ್ಬಂಧಿಸಿದರೆ ಅದು ದೇವರು ಆಕೆಯ ಹಕ್ಕನ್ನು ಉಲ್ಲಂಘಿಸಿದಂತೆ ಎಂದು ಹೇಳಿದರು.
ಯಾವ ಭಕ್ತರು ಸ್ತ್ರೀಯರಿಗೆ ದೇವರ ದರ್ಶನಕ್ಕೆ ಅವಕಾಶ ಕೊಡುವುದಿಲ್ಲವೋ ಅವರು ಭಕ್ತರೇ ಅಲ್ಲ. ಯಾವ ದೇವರು ಮಹಿಳೆಯನ್ನು ನೋಡೋದಿಲ್ಲವೋ ಅದು ದೇವರೇ ಅಲ್ಲ. ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ, ದೇವರ ದರ್ಶನಕ್ಕೆ ಅವಕಾಶ ಕೊಡಲೇಬೇಕು. ಮಹಿಳೆಯರನ್ನು ತಡೆಯುವ ಹಕ್ಕು ಯಾರಿಗೂ ಇಲ್ಲ ಅಂತಾ ಹೇಳಿದ್ದಾರೆ.
ಶಾರ್ಜಾದ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಮಾತನಾಡಿದ ಅವರು, ಭೂಮಿಯನ್ನು ಹೆಣ್ಣಿಗೆ ಹೋಲಿಸುತ್ತೇವೆ, ಹೆಣ್ಣು ಅಂದ್ರೆ ತಾಯಿ, ಹೆಣ್ಣಿಗೆ ಅಪಾರವಾದ ಗೌರವ ಕೊಡುವ ಸಂಸ್ಕೃತಿಯಲ್ಲಿ ದೇವರನ್ನು ನೋಡುವುದು ಮತ್ತು ಪೂಜಿಸುವ ಹಕ್ಕನ್ನು ನಿರ್ಬಂಧಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…