Featured

ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ : ಕೇರಳ ದೇವಸ್ವಂ ಸಚಿವ ಸುರೇಂದ್ರನ್ -Vishwanews24

ತಿರುವನಂತಪುರಂ:ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ ಎಂದು ಕೇರಳ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ. ಈ ಮೂಲಕ ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದ ಕಡೆಯಿಂದ ಸಹಮತವಿಲ್ಲ ಎಂಬ ಮಾತನ್ನು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶಬರಿಮಲೆ ಕಾರ್ಯಕರ್ತರ ಕ್ರಿಯಾವಾದಕ್ಕೆ ಇರುವ ಸ್ಥಳವಲ್ಲ, ಅಲ್ಲಿಗೆ ಹೋಗಲು ಇಚ್ಛಿಸುವ ಮಹಿಳೆಯರು ಸುಪ್ರೀಂ ಕೋರ್ಟ್ ಆದೇಶವನ್ನಿಟ್ಟುಕೊಂಡು ತಮ್ಮ ಜಾಗ್ರತೆಯಲ್ಲಿಯೇ ಹೋಗಬೇಕು ಎಂದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಮಹಿಳೆಯರನ್ನು ಶಬರಿಮಲೆಗೆ ಕರೆದುಕೊಂಡು ಹೋಗುವುದಿಲ್ಲ. ಈ ಹಿಂದೆ ಕೂಡ ಮಹಿಳೆಯರನ್ನು ಸರ್ಕಾರ ಕರೆದುಕೊಂಡು ಹೋಗಿರಲಿಲ್ಲ. ಇನ್ನು ಮುಂದೆ ಕೂಡ ಇಲ್ಲ ಎಂದು ತಿಳಿಸಿದರು.

ಮಹಿಳಾ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು ಅಂತವರು ಪ್ರಚಾರಕ್ಕೋಸ್ಕರ ಹೀಗೆಲ್ಲಾ ಮಾಡುತ್ತಾರೆ. ಅಂತವರು ಭಕ್ತಿಯಿಂದ ಶಬರಿಮಲೆಗೆ ಹೋಗುವುದಲ್ಲ, ವೈಯಕ್ತಿಕ ಹಿತಾಸಕ್ತಿಗಾಗಿ ಹೀಗೆ ಮಾಡುತ್ತಾರೆ. ಸರ್ಕಾರ ಇಂತವರಿಗೆ ಬೆಂಬಲ ಕೊಡುವುದಿಲ್ಲ ಎಂದು ಕಡಕಂಪಲ್ಲಿ ಹೇಳಿದರು.

ಶಬರಿಮಲೆಯ ವಾರ್ಷಿಕ ಮಂಡಲಪೂಜೆ ಅವಧಿಯಲ್ಲಿ ಯಾತ್ರಿಕರು ಶಾಂತಿ ಕಾಪಾಡುವಂತೆ ಸಚಿವರು ಭಕ್ತರಲ್ಲಿ ಮನವಿ ಮಾಡಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

3 hours ago