Featured

ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ : ಕೇರಳ ದೇವಸ್ವಂ ಸಚಿವ ಸುರೇಂದ್ರನ್ -Vishwanews24

ತಿರುವನಂತಪುರಂ:ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ ಎಂದು ಕೇರಳ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ. ಈ ಮೂಲಕ ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದ ಕಡೆಯಿಂದ ಸಹಮತವಿಲ್ಲ ಎಂಬ ಮಾತನ್ನು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶಬರಿಮಲೆ ಕಾರ್ಯಕರ್ತರ ಕ್ರಿಯಾವಾದಕ್ಕೆ ಇರುವ ಸ್ಥಳವಲ್ಲ, ಅಲ್ಲಿಗೆ ಹೋಗಲು ಇಚ್ಛಿಸುವ ಮಹಿಳೆಯರು ಸುಪ್ರೀಂ ಕೋರ್ಟ್ ಆದೇಶವನ್ನಿಟ್ಟುಕೊಂಡು ತಮ್ಮ ಜಾಗ್ರತೆಯಲ್ಲಿಯೇ ಹೋಗಬೇಕು ಎಂದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಮಹಿಳೆಯರನ್ನು ಶಬರಿಮಲೆಗೆ ಕರೆದುಕೊಂಡು ಹೋಗುವುದಿಲ್ಲ. ಈ ಹಿಂದೆ ಕೂಡ ಮಹಿಳೆಯರನ್ನು ಸರ್ಕಾರ ಕರೆದುಕೊಂಡು ಹೋಗಿರಲಿಲ್ಲ. ಇನ್ನು ಮುಂದೆ ಕೂಡ ಇಲ್ಲ ಎಂದು ತಿಳಿಸಿದರು.

ಮಹಿಳಾ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು ಅಂತವರು ಪ್ರಚಾರಕ್ಕೋಸ್ಕರ ಹೀಗೆಲ್ಲಾ ಮಾಡುತ್ತಾರೆ. ಅಂತವರು ಭಕ್ತಿಯಿಂದ ಶಬರಿಮಲೆಗೆ ಹೋಗುವುದಲ್ಲ, ವೈಯಕ್ತಿಕ ಹಿತಾಸಕ್ತಿಗಾಗಿ ಹೀಗೆ ಮಾಡುತ್ತಾರೆ. ಸರ್ಕಾರ ಇಂತವರಿಗೆ ಬೆಂಬಲ ಕೊಡುವುದಿಲ್ಲ ಎಂದು ಕಡಕಂಪಲ್ಲಿ ಹೇಳಿದರು.

ಶಬರಿಮಲೆಯ ವಾರ್ಷಿಕ ಮಂಡಲಪೂಜೆ ಅವಧಿಯಲ್ಲಿ ಯಾತ್ರಿಕರು ಶಾಂತಿ ಕಾಪಾಡುವಂತೆ ಸಚಿವರು ಭಕ್ತರಲ್ಲಿ ಮನವಿ ಮಾಡಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago