Featured

ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ : ಕೇರಳ ದೇವಸ್ವಂ ಸಚಿವ ಸುರೇಂದ್ರನ್ -Vishwanews24

ತಿರುವನಂತಪುರಂ:ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ ಎಂದು ಕೇರಳ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ. ಈ ಮೂಲಕ ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದ ಕಡೆಯಿಂದ ಸಹಮತವಿಲ್ಲ ಎಂಬ ಮಾತನ್ನು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶಬರಿಮಲೆ ಕಾರ್ಯಕರ್ತರ ಕ್ರಿಯಾವಾದಕ್ಕೆ ಇರುವ ಸ್ಥಳವಲ್ಲ, ಅಲ್ಲಿಗೆ ಹೋಗಲು ಇಚ್ಛಿಸುವ ಮಹಿಳೆಯರು ಸುಪ್ರೀಂ ಕೋರ್ಟ್ ಆದೇಶವನ್ನಿಟ್ಟುಕೊಂಡು ತಮ್ಮ ಜಾಗ್ರತೆಯಲ್ಲಿಯೇ ಹೋಗಬೇಕು ಎಂದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಮಹಿಳೆಯರನ್ನು ಶಬರಿಮಲೆಗೆ ಕರೆದುಕೊಂಡು ಹೋಗುವುದಿಲ್ಲ. ಈ ಹಿಂದೆ ಕೂಡ ಮಹಿಳೆಯರನ್ನು ಸರ್ಕಾರ ಕರೆದುಕೊಂಡು ಹೋಗಿರಲಿಲ್ಲ. ಇನ್ನು ಮುಂದೆ ಕೂಡ ಇಲ್ಲ ಎಂದು ತಿಳಿಸಿದರು.

ಮಹಿಳಾ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು ಅಂತವರು ಪ್ರಚಾರಕ್ಕೋಸ್ಕರ ಹೀಗೆಲ್ಲಾ ಮಾಡುತ್ತಾರೆ. ಅಂತವರು ಭಕ್ತಿಯಿಂದ ಶಬರಿಮಲೆಗೆ ಹೋಗುವುದಲ್ಲ, ವೈಯಕ್ತಿಕ ಹಿತಾಸಕ್ತಿಗಾಗಿ ಹೀಗೆ ಮಾಡುತ್ತಾರೆ. ಸರ್ಕಾರ ಇಂತವರಿಗೆ ಬೆಂಬಲ ಕೊಡುವುದಿಲ್ಲ ಎಂದು ಕಡಕಂಪಲ್ಲಿ ಹೇಳಿದರು.

ಶಬರಿಮಲೆಯ ವಾರ್ಷಿಕ ಮಂಡಲಪೂಜೆ ಅವಧಿಯಲ್ಲಿ ಯಾತ್ರಿಕರು ಶಾಂತಿ ಕಾಪಾಡುವಂತೆ ಸಚಿವರು ಭಕ್ತರಲ್ಲಿ ಮನವಿ ಮಾಡಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

4 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

4 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

5 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

5 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

5 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

6 hours ago