Featured

ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡುವುದಿಲ್ಲ : ಪ್ರತಿಪಕ್ಷಗಳ ಹೋರಾಟಕ್ಕೆ ಮಣಿಯದ ಕೇರಳ ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು  ಹೇಳಿದ್ದಾರೆ.

ಕೇರಳದಲ್ಲಿ ವಿಧಾನಸಭಾ ಅಧಿವೇಶನ ಪ್ರಾರಂಭವಾಗಿತ್ತು. ಈ ಅಧಿವೇಶನದಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸದಸ್ಯರು ಶಬರಿಮಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಸದನದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಪಕ್ಷಗಳ ಹೋರಾಟಕ್ಕೆ ಮಣಿಯದ ಸಿಎಂ ಪಿಣರಾಯ್, ಶಬರಿಮಲೆಯಲ್ಲಿ ಜಾರಿಮಾಡಲಾಗಿರುವ ನಿಷೇಧಾಜ್ಞೆಯನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸುವುದಿಲ್ಲ. ನಾವು ಸುಪ್ರೀಂ ನ್ಯಾಯಾಲಯದ ತೀರ್ಪನ್ನು ಪಾಲಿಸಬೇಕಾಗಿದೆ. ಶಬರಿಮಲೆಯಲ್ಲಿ ಜಾರಿಯಲ್ಲಿರುವ ಆದೇಶದ ಬಗ್ಗೆ ಹೈ ಕೋರ್ಟ್ ಕೂಡ ಸಮ್ಮತಿ ಸೂಚಿಸಿದೆ. ಹೀಗಾಗಿ ನಿಷೇಧಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಬೆಂಬಲದೊಂದಿಗೆ ಸಂಘ ಪರಿವಾರದವರು ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ಸಮಸ್ಯೆ ಸೃಷ್ಟಿಸುತ್ತಿದೆ. ಯಾವುದೇ ಕಾರಣಕ್ಕೂ ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆ ಮಾಡಲು ಬಿಡುವುದಿಲ್ಲ ಮತ್ತು ನಿಷೇಧಾಜ್ಞೆಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದು ಪಿಣರಾಯ್ ವಿಜಯನ್ ಅವರು ಖಡಕ್ ಆಗಿ ಹೇಳಿದ್ದಾರೆ.

Vishwa News 24

Recent Posts

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

12 minutes ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago