ರಾಷ್ಟ್ರ ನ್ಯೂಸ್

ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಬಂಧನ ; ಸಿಎಂ ಪಿಣರಾಯಿ ನಿವಾಸದ ಮುಂದೆ ಪ್ರತಿಭಟನೆ

ಶಬರಿಮಲೆ, : ಶಬರಿಮಲೆ ದೇಗುಲದಲ್ಲಿ ತಡರಾತ್ರಿ ಸುಮಾರು 70 ಅಯ್ಯಪ್ಪ ಭಕ್ತರನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಕೇರಳ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿವೆ.

ಈ ಹಿಂದಿನ ಹಿಂಸಾತ್ಮಕ ಘಟನೆಗಳನ್ನು ಆಧರಿಸಿ ಶಬರಿಮಲೆಯಲ್ಲಿ ಪೊಲೀಸರು ನಿಷೇಧಾಜ್ಞೆ ಹೇರಿದ್ದು, ರಾತ್ರಿ ವೇಳೆ ಸನ್ನಿಧಾನದಲ್ಲಿ ಯಾರೂ ತಂಗುವಂತಿಲ್ಲ ಎಂದು ಆದೇಶಿಸಿ, ಭಕ್ತರನ್ನು ಬಂಧಿಸಿದ್ದರು. ಆದರೆ ಪೊಲೀಸರ ಈ ನಡೆಯನ್ನು ವಿರೋಧಿಸಿ ಸೋಮವಾರ ರಾಜ್ಯಾದ್ಯಂತ ಮತ್ತೆ ಪ್ರತಿಭಟನೆ ಆರಂಭವಾಗಿದೆ.

ರವಿವಾರ ರಾತ್ರಿ ನಡೆದ ಘಟನೆಯನ್ನು ಖಂಡಿಸಿ ಸಂಘಪರಿವಾರದ ಕಾರ್ಯಕರ್ತರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಿರುವನಂತಪುರದಲ್ಲಿರುವ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ಕಾರ್ಯಕರ್ತರು ಕೊಚ್ಚಿ, ಕೋಯಿಕ್ಕೋಡ್, ಮಲ್ಲಪ್ಪುರಂ, ಅರನಮೂಲ,ಕೊಲ್ಲಂ, ಕಾಲಾಡಿ ಹಾಗೂ ಇಡುಕ್ಕಿ ಸಹಿತ ಹಲವು ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಹಿಂದಿನ ಹಿಂಸಾಚಾರ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸನ್ನಿಧಾನಂ ಹಾಗೂ ದೇವಸ್ಥಾನ ಒಳಗೆ ಭಕ್ತಾದಿಗಳಿಗೆ ಕಠಿಣ ನಿರ್ಬಂಧ ಹೇರುತ್ತಿದ್ದಾರೆ. ರಾತ್ರಿ ವೇಳೆ ದೇವಸ್ಥಾನದಲ್ಲಿ ತಂಗುವುದಕ್ಕೆ ಅವಕಾಶವನ್ನು ನಿರಾಕರಿಸುತ್ತಿದ್ದಾರೆ.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago