ಶಬರಿಮಲೆ: ಪವಿತ್ರ ಮಕರ ಜ್ಯೋತಿ ಸೋಮವಾರ ಅಂದರೆ ಇಂದು ಸಂಜೆ ಕಾಣಿಸಿಕೊಳ್ಳಲಿದೆ. ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಶಬರಿಮಲೆ ದೇಗುಲಕ್ಕೆ ಸಾವಿರಾರು ಜನರು ಬರುತ್ತಿದ್ದಾರೆ.
ಋತುಸ್ರಾವ ವಯೋಮಾನದ ಮಹಿಳೆಯರು ದೇಗುಲ ಪ್ರವೇಶಿಸುವುದಕ್ಕೆ ಸಂಬಂಧಿಸಿದ ವಿವಾದ ಭಕ್ತರ ಸಂಖ್ಯೆ ಕುಸಿಯಲು ಕಾರಣ ಎನ್ನಲಾಗಿದೆ. ಕೇರಳದ ಭಕ್ತರು ಶಬರಿಮಲೆಗೆ ಭೇಟಿ ಕೊಡುವ ಸಂಖ್ಯೆ ಈ ಬಾರಿ ಕಮ್ಮಿಯಾಗಿದೆ. ಆದರೆ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರ ಪ್ರದೇಶದಿಂದ ಬರುವ ಭಕ್ತರ ಸಂಖ್ಯೆ ಗಣನೀಯವಾಗಿಯೇ ಇದೆ.
ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳ ಬಳಿಯಲ್ಲಿ ಭಾರಿ ಸರತಿ ಸಾಲು ಈ ಸಾರಿ ಕಂಡು ಬಂದಿಲ್ಲ. ದಟ್ಟಣೆ ಕಡಿಮೆ ಇರುವುದರಿಂದ ಭಕ್ತರಿಗೆ ದರ್ಶನ ಪಡೆಯುವುದು ಸುಲಭವಾಗಿದೆ.
ಶಬರಿಮಲೆಗೆ ಸಮೀಪದ ಪ್ರಮುಖ ಪಟ್ಟಣ ಪಟ್ಟನಂತಿಟ್ಟ. ತೀರ್ಥಯಾತ್ರೆ ಋತುವಿನಲ್ಲಿ ಈ ಪಟ್ಟಣ ಗಿಜಿಗುಟ್ಟುತ್ತಿರುತ್ತದೆ. ಆದರೆ, ಪಟ್ಟನಂತಿಟ್ಟ ಬಸ್ ನಿಲ್ದಾಣದಲ್ಲಿ ಭಾನುವಾರ ಭಕ್ತರ ದಟ್ಟಣೆ ಇರಲಿಲ್ಲ.
ಶಬರಿಮಲೆಯಿಂದ 80 ಕಿ.ಮೀ. ದೂರದಲ್ಲಿರುವ ಪಂದಲಂ ಅರಮನೆಯಿಂದ ಅಯ್ಯಪ್ಪ ಸ್ವಾಮಿಯ ಆಭರಣಗಳನ್ನು ಶಬರಿಮಲೆಗೆ ಒಯ್ಯಲಾಗುತ್ತದೆ. ಭಾನುವಾರ ಬೆಳಿಗ್ಗೆ ಈ ಆಭರಣಗಳು ಇಲ್ಲಿ ತಲುಪುತ್ತವೆ. ಮಕರಸಂಕ್ರಮಣ ಪೂಜೆಯ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿಗೆ ಈ ಆಭರಣಗಳನ್ನು ತೊಡಿಸಲಾಗುತ್ತದೆ.
ಆದರೆ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಭಾನುವಾರ ಮಧ್ಯಾಹ್ನ ವರೆಗೆ ಪಂಪಾ ತಲುಪಿದ ಭಕ್ತರ ಸಂಖ್ಯೆ 53,700 ಎಂದು ಇಲ್ಲಿನ ಪೊಲೀಸ್ ನಿಯಂತ್ರಣ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷದ ಮಕರ ಜ್ಯೋತಿ ಮುನ್ನಾದಿನ ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ಕೊಟ್ಟಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…