ತಿರುವನಂತಪುರ: ಶಬರಿಮಲೆಯ ಅಯ್ಯಪ್ಪನ ದೇಗುಲದ ಗರ್ಭಗುಡಿಯ ಚಿನ್ನ ಲೇಪಿತ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿರುವುದು ದೃಢಪಟ್ಟಿದೆ.
ಜು.16ರಂದು ಮಾಸಿಕ ಪೂಜೆಗೆಂದು ದೇಗುಲದ ಗರ್ಭಗುಡಿ ತೆರೆದಾಗ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ.
ಗರ್ಭಗುಡಿಯ ಎಡಭಾಗದ ಮಾಳಿಗೆಯಲ್ಲಿ ಸೋರಿಕೆ ಉಂಟಾಗಿದ್ದು, ಶೀಘ್ರವೇ ಅದನ್ನು ದುರಸ್ಥಿಗೊಳಿಸಲಾಗುವುದು.
ಆ.3ರಂದು ದೇಗುಲ ವಾಸ್ತುಶಿಲ್ಪಿಗಳ ತಂಡವು ಪರಿಶೀಲನೆ ನಡೆಸಲಿದೆ. ನಂತರ ದುರಸ್ತಿ ನಡೆಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಅಧ್ಯಕ್ಷ ಕೆ.ಅನಂತಗೋಪನ್ ತಿಳಿಸಿದ್ದಾರೆ.
ಅಯ್ಯಪ್ಪ ದೇಗುಲದ ಗರ್ಭಗುಡಿಯ ಮಾಳಿಗೆಗೆ ಚಿನ್ನದ ಹೊದಿಕೆಯನ್ನು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ 1998ರಲ್ಲಿ ದೇಣಿಗೆಯಾಗಿ ನೀಡಿದ್ದರು.
31ಕೆ.ಜಿ ಚಿನ್ನ ಜತೆ 1900ಕೆ.ಜಿ ತಾಮ್ರವನ್ನು ಕೊಡಲಾಗಿತ್ತು. ಈ ದೇಣಿಗೆಗೆ ಆಗಿನ ಕಾಲದಲ್ಲಿ ಮಲ್ಯ ಅವರಿಗೆ 18 ಕೋಟಿ ರೂ. ವೆಚ್ಚವಾಗಿತ್ತು.
ಇದನ್ನೂ ಓದಿ : ಮಂಗಳೂರು : 9 ವರ್ಷದ ಬಾಲಕಿ ಮೇಲೆ ಮಲತಂದೆಯಿಂದ ಅತ್ಯಾಚಾರ – Vishwnaews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…