ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯ 18 ಮೆಟ್ಟಿಲುಗಳ ಮೇಲೆ ನಿಂತು ಪೊಲೀಸರು ಫೋಟೋಶೂಟ್ ಮಾಡಿಸಿರುವುದು ಇದೀಗ ತೀವ್ರ ವಿವಾದಕ್ಕೀಡಾಗಿದೆ. ಈ ಘಟನೆ ಕುರಿತು ಕೇರಳದ ಎಡಿಜಿಪಿ, ದೇವಸ್ಥಾನದ ವಿಶೇಷ ಅಧಿಕಾರಿ ಬಳಿ ವರದಿ ಕೇಳಿದ್ದಾರೆ.
ದೇವಸ್ಥಾನದಲ್ಲಿ ತಮ್ಮ ಕರ್ತವ್ಯದ ನಂತರ ಮೊದಲ ಬ್ಯಾಚ್ನ ಪೊಲೀಸರು 18 ಮೆಟ್ಟಿಲುಗಳ ಮೇಲೆ ನಿಂತು ಕ್ಯಾಮೆರಾಗೆ ಪೋಸ್ ನೀಡಿದರು. ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಭಕ್ತರಿಂದ ತೀವ್ರ ಟೀಕೆಗಳು ವ್ಯಕ್ತವಾದ ಬಳಿಕ ವಿವಾದ ಭುಗಿಲೆದ್ದಿದೆ. ಸರ್ಕಾರಕ್ಕೆ ಭಕ್ತರ ಬಿಸಿ ತಟ್ಟುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಯ ಬಳಿ ವರದಿ ಕೇಳಿದೆ.
ಪೊಲೀಸರ ಫೋಟೋಶೂಟ್ ವಿರುದ್ಧ ವಿಶ್ವ ಹಿಂದು ಪರಿಷತ್ ಹರಿಹಾಯ್ದಿದೆ. ಹದಿನೆಂಟು ಮೆಟ್ಟಿಲನ್ನು ಅಯ್ಯಪ್ಪ ಭಕ್ತರು ಆಶೀರ್ವಾದ ಎಂದು ಪರಿಗಣಿಸುತ್ತಾರೆ. ಒಂದೊಂದು ಮೆಟ್ಟಿಲಿಗೂ ಒಂದೊಂದು ಅರ್ಥವಿದೆ. 18 ಮೆಟ್ಟಿಲನ್ನು ಇಳಿಯುವಾಗಲೂ ಭಕ್ತರು ದೇವರಿಗೆ ಬೆನ್ನು ತೋರುವುದಿಲ್ಲ. ಪತಿತಂಪಾಡಿ ವಿಧಿವಿಧಾನದಲ್ಲಿರುವಾಗಲೂ ಅಯ್ಯಪ್ಪನಿಗೆ ಬೆನ್ನು ತೋರಿಸಿ ಅಯ್ಯಪ್ಪ ಭಕ್ತರು ಫೋಟೋಶೂಟ್ ಮಾಡುವಂತಿಲ್ಲ. ಹೀಗಿರುವಾಗ ಪೊಲೀಸರು ಈ ರೀತಿ ಮಾಡಬಹುದೇ ಎಂದು ವಿಶ್ವ ಹಿಂದು ಪರಿಷತ್ ಕೇರಳ ಘಟಕ ಸ್ಪಷ್ಟಪಡಿಸಿದೆ.
ವಿಶ್ವ ಹಿಂದು ಪರಿಷತ್ ರಾಜ್ಯಾಧ್ಯಕ್ಷ ವಿ.ಜಿ.ತಂಪಿ, ಪ್ರಧಾನ ಕಾರ್ಯದರ್ಶಿ ವಿ.ಆರ್.ರಾಜಶೇಖರನ್ ಮಾತನಾಡಿ, ಪೊಲೀಸ್ ಅಧಿಕಾರಿಗಳಿಗೆ ಬೆಂಬಲ ನೀಡಿದ ಮುಖ್ಯಮಂತ್ರಿಗಳ ಮೊದಲ ಆರೋಪಿಯಾಗಿದ್ದಾರೆ ಎಂದು ಕಿಡಿಕಾರಿದರು. ಈ ಘಟನೆ ಕುರಿತು ವರದಿ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಕೇರಳದ ಎಡಿಜಿಪಿ ಸೂಚನೆ ನೀಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…