ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯ 18 ಮೆಟ್ಟಿಲುಗಳ ಮೇಲೆ ನಿಂತು ಪೊಲೀಸರು ಫೋಟೋಶೂಟ್ ಮಾಡಿಸಿರುವುದು ಇದೀಗ ತೀವ್ರ ವಿವಾದಕ್ಕೀಡಾಗಿದೆ. ಈ ಘಟನೆ ಕುರಿತು ಕೇರಳದ ಎಡಿಜಿಪಿ, ದೇವಸ್ಥಾನದ ವಿಶೇಷ ಅಧಿಕಾರಿ ಬಳಿ ವರದಿ ಕೇಳಿದ್ದಾರೆ.
ದೇವಸ್ಥಾನದಲ್ಲಿ ತಮ್ಮ ಕರ್ತವ್ಯದ ನಂತರ ಮೊದಲ ಬ್ಯಾಚ್ನ ಪೊಲೀಸರು 18 ಮೆಟ್ಟಿಲುಗಳ ಮೇಲೆ ನಿಂತು ಕ್ಯಾಮೆರಾಗೆ ಪೋಸ್ ನೀಡಿದರು. ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಭಕ್ತರಿಂದ ತೀವ್ರ ಟೀಕೆಗಳು ವ್ಯಕ್ತವಾದ ಬಳಿಕ ವಿವಾದ ಭುಗಿಲೆದ್ದಿದೆ. ಸರ್ಕಾರಕ್ಕೆ ಭಕ್ತರ ಬಿಸಿ ತಟ್ಟುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಯ ಬಳಿ ವರದಿ ಕೇಳಿದೆ.
ಪೊಲೀಸರ ಫೋಟೋಶೂಟ್ ವಿರುದ್ಧ ವಿಶ್ವ ಹಿಂದು ಪರಿಷತ್ ಹರಿಹಾಯ್ದಿದೆ. ಹದಿನೆಂಟು ಮೆಟ್ಟಿಲನ್ನು ಅಯ್ಯಪ್ಪ ಭಕ್ತರು ಆಶೀರ್ವಾದ ಎಂದು ಪರಿಗಣಿಸುತ್ತಾರೆ. ಒಂದೊಂದು ಮೆಟ್ಟಿಲಿಗೂ ಒಂದೊಂದು ಅರ್ಥವಿದೆ. 18 ಮೆಟ್ಟಿಲನ್ನು ಇಳಿಯುವಾಗಲೂ ಭಕ್ತರು ದೇವರಿಗೆ ಬೆನ್ನು ತೋರುವುದಿಲ್ಲ. ಪತಿತಂಪಾಡಿ ವಿಧಿವಿಧಾನದಲ್ಲಿರುವಾಗಲೂ ಅಯ್ಯಪ್ಪನಿಗೆ ಬೆನ್ನು ತೋರಿಸಿ ಅಯ್ಯಪ್ಪ ಭಕ್ತರು ಫೋಟೋಶೂಟ್ ಮಾಡುವಂತಿಲ್ಲ. ಹೀಗಿರುವಾಗ ಪೊಲೀಸರು ಈ ರೀತಿ ಮಾಡಬಹುದೇ ಎಂದು ವಿಶ್ವ ಹಿಂದು ಪರಿಷತ್ ಕೇರಳ ಘಟಕ ಸ್ಪಷ್ಟಪಡಿಸಿದೆ.
ವಿಶ್ವ ಹಿಂದು ಪರಿಷತ್ ರಾಜ್ಯಾಧ್ಯಕ್ಷ ವಿ.ಜಿ.ತಂಪಿ, ಪ್ರಧಾನ ಕಾರ್ಯದರ್ಶಿ ವಿ.ಆರ್.ರಾಜಶೇಖರನ್ ಮಾತನಾಡಿ, ಪೊಲೀಸ್ ಅಧಿಕಾರಿಗಳಿಗೆ ಬೆಂಬಲ ನೀಡಿದ ಮುಖ್ಯಮಂತ್ರಿಗಳ ಮೊದಲ ಆರೋಪಿಯಾಗಿದ್ದಾರೆ ಎಂದು ಕಿಡಿಕಾರಿದರು. ಈ ಘಟನೆ ಕುರಿತು ವರದಿ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಕೇರಳದ ಎಡಿಜಿಪಿ ಸೂಚನೆ ನೀಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…