ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯ 18 ಮೆಟ್ಟಿಲುಗಳ ಮೇಲೆ ನಿಂತು ಪೊಲೀಸರು ಫೋಟೋಶೂಟ್ ಮಾಡಿಸಿರುವುದು ಇದೀಗ ತೀವ್ರ ವಿವಾದಕ್ಕೀಡಾಗಿದೆ. ಈ ಘಟನೆ ಕುರಿತು ಕೇರಳದ ಎಡಿಜಿಪಿ, ದೇವಸ್ಥಾನದ ವಿಶೇಷ ಅಧಿಕಾರಿ ಬಳಿ ವರದಿ ಕೇಳಿದ್ದಾರೆ.
ದೇವಸ್ಥಾನದಲ್ಲಿ ತಮ್ಮ ಕರ್ತವ್ಯದ ನಂತರ ಮೊದಲ ಬ್ಯಾಚ್ನ ಪೊಲೀಸರು 18 ಮೆಟ್ಟಿಲುಗಳ ಮೇಲೆ ನಿಂತು ಕ್ಯಾಮೆರಾಗೆ ಪೋಸ್ ನೀಡಿದರು. ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಭಕ್ತರಿಂದ ತೀವ್ರ ಟೀಕೆಗಳು ವ್ಯಕ್ತವಾದ ಬಳಿಕ ವಿವಾದ ಭುಗಿಲೆದ್ದಿದೆ. ಸರ್ಕಾರಕ್ಕೆ ಭಕ್ತರ ಬಿಸಿ ತಟ್ಟುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಯ ಬಳಿ ವರದಿ ಕೇಳಿದೆ.
ಪೊಲೀಸರ ಫೋಟೋಶೂಟ್ ವಿರುದ್ಧ ವಿಶ್ವ ಹಿಂದು ಪರಿಷತ್ ಹರಿಹಾಯ್ದಿದೆ. ಹದಿನೆಂಟು ಮೆಟ್ಟಿಲನ್ನು ಅಯ್ಯಪ್ಪ ಭಕ್ತರು ಆಶೀರ್ವಾದ ಎಂದು ಪರಿಗಣಿಸುತ್ತಾರೆ. ಒಂದೊಂದು ಮೆಟ್ಟಿಲಿಗೂ ಒಂದೊಂದು ಅರ್ಥವಿದೆ. 18 ಮೆಟ್ಟಿಲನ್ನು ಇಳಿಯುವಾಗಲೂ ಭಕ್ತರು ದೇವರಿಗೆ ಬೆನ್ನು ತೋರುವುದಿಲ್ಲ. ಪತಿತಂಪಾಡಿ ವಿಧಿವಿಧಾನದಲ್ಲಿರುವಾಗಲೂ ಅಯ್ಯಪ್ಪನಿಗೆ ಬೆನ್ನು ತೋರಿಸಿ ಅಯ್ಯಪ್ಪ ಭಕ್ತರು ಫೋಟೋಶೂಟ್ ಮಾಡುವಂತಿಲ್ಲ. ಹೀಗಿರುವಾಗ ಪೊಲೀಸರು ಈ ರೀತಿ ಮಾಡಬಹುದೇ ಎಂದು ವಿಶ್ವ ಹಿಂದು ಪರಿಷತ್ ಕೇರಳ ಘಟಕ ಸ್ಪಷ್ಟಪಡಿಸಿದೆ.
ವಿಶ್ವ ಹಿಂದು ಪರಿಷತ್ ರಾಜ್ಯಾಧ್ಯಕ್ಷ ವಿ.ಜಿ.ತಂಪಿ, ಪ್ರಧಾನ ಕಾರ್ಯದರ್ಶಿ ವಿ.ಆರ್.ರಾಜಶೇಖರನ್ ಮಾತನಾಡಿ, ಪೊಲೀಸ್ ಅಧಿಕಾರಿಗಳಿಗೆ ಬೆಂಬಲ ನೀಡಿದ ಮುಖ್ಯಮಂತ್ರಿಗಳ ಮೊದಲ ಆರೋಪಿಯಾಗಿದ್ದಾರೆ ಎಂದು ಕಿಡಿಕಾರಿದರು. ಈ ಘಟನೆ ಕುರಿತು ವರದಿ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಕೇರಳದ ಎಡಿಜಿಪಿ ಸೂಚನೆ ನೀಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…