ತಿರುವನಂತಪುರಂ: ಸುಪ್ರೀಮ್ ಕೋರ್ಟ್ ತೀರ್ಮಾನದಂತೆ ಹಲವು ವಿಧದ ವಿರೋಧಗಳ ನಡುವೆಯೂ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದಕ್ಕೆ ತನ್ನ ಅತ್ತೆಯಿಂದಲೇ ಹಲ್ಲೆಗೀಡಾಗಿ ಸುದ್ದಿಯಾಗಿದ್ದ ಕೇರಳದ ಕನಕದುರ್ಗ ಎಂಬ ಮಹಿಳೆಗೆ ಇದೀಗ ಕುಟುಂಬ ಸದಸ್ಯರು ಬಹಿಷ್ಕಾರ ಹಾಕಿದ್ದಾರೆ.
ಅತ್ತೆಯಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬ ಸದಸ್ಯರು ಮನೆ ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಈಗ ಕನಕದುರ್ಗ ಸರ್ಕಾರದ ವಸತಿ ನಿಲಯದಲ್ಲಿ ಆಶ್ರಯ ಪಡೆದಿದ್ದಾರೆ.
ಡಿಸೆಂಬರ್ 22 ರಂದು ತಿರುವನಂತಪುರಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತೇನೆ ಎಂದು ಕನಕದುರ್ಗ ಸುಳ್ಳು ಹೇಳಿ ದೇವಾಲಯವನ್ನು ಪ್ರವೇಶಿಸಿದ್ದರು. ಭಕ್ತರ ವಿರೋಧದ ಮಧ್ಯೆ ದೇವಾಲಯವನ್ನು ಪ್ರವೇಶಿಸಿದ್ದಕ್ಕೆ ಕೋಪಗೊಂಡಿರುವ ಅತ್ತೆ ಮತ್ತು ಮಾವ ಕನಕ ದುರ್ಗ ಅವರಿಗೆ ಮನೆಯ ಪ್ರವೇಶವನ್ನು ನಿರಾಕರಿಸಿ ಹೊರದಬ್ಬಿದ್ದಾರೆ.
ಕನಕದುರ್ಗಾ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಿದ್ದನ್ನು ವಿರೋಧಿಸಿ ಆಕೆಯ ಅತ್ತೆ ಹಲ್ಲೆ ಮಾಡಿದ್ದರು. ಆಕೆಯ ಸೋದರ ಭರತ್ ಭೂಷಣ್ ಕೂಡ ವಿರೋಧಿಸಿದ್ದರು. ಪತಿಯ ಮನೆಯಿಂದ ಹೊರಹಾಕಲ್ಪಟ್ಟ ಕನಕದುರ್ಗಗೆ ತನ್ನ ಅಣ್ಣ ಭರತ್ ಕೂಡ ಆಶ್ರಯ ನೀಡಲಿಲ್ಲ. ತನ್ನ ಮನೆಗೆ ಕಾಲಿಡದಂತೆ ಅಣ್ಣ ಕೂಡ ತಾಕೀತು ಮಾಡಿದ್ದಾರೆ.
ಅಯ್ಯಪ್ಪ ದೇವಾಲಯದ ಸಂಪ್ರದಾಯವನ್ನು ಮುರಿದಿದ್ದಕ್ಕೆ ಕನಕದುರ್ಗ ಸಾರ್ವಜನಿಕವಾಗಿ ಹಿಂದೂ ಸಮುದಾಯ ಮತ್ತು ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಕ್ಷಮೆ ಕೇಳದ ಹೊರತು ಆಕೆಯನ್ನು ಮನೆಗೆ ಸೇರಿಸಿಕೊಳ್ಳುವುದಿಲ್ಲ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…