ತಿರುವನಂತಪುರಂ: ಸುಪ್ರೀಮ್ ಕೋರ್ಟ್ ತೀರ್ಮಾನದಂತೆ ಹಲವು ವಿಧದ ವಿರೋಧಗಳ ನಡುವೆಯೂ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದಕ್ಕೆ ತನ್ನ ಅತ್ತೆಯಿಂದಲೇ ಹಲ್ಲೆಗೀಡಾಗಿ ಸುದ್ದಿಯಾಗಿದ್ದ ಕೇರಳದ ಕನಕದುರ್ಗ ಎಂಬ ಮಹಿಳೆಗೆ ಇದೀಗ ಕುಟುಂಬ ಸದಸ್ಯರು ಬಹಿಷ್ಕಾರ ಹಾಕಿದ್ದಾರೆ.
ಅತ್ತೆಯಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬ ಸದಸ್ಯರು ಮನೆ ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಈಗ ಕನಕದುರ್ಗ ಸರ್ಕಾರದ ವಸತಿ ನಿಲಯದಲ್ಲಿ ಆಶ್ರಯ ಪಡೆದಿದ್ದಾರೆ.
ಡಿಸೆಂಬರ್ 22 ರಂದು ತಿರುವನಂತಪುರಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತೇನೆ ಎಂದು ಕನಕದುರ್ಗ ಸುಳ್ಳು ಹೇಳಿ ದೇವಾಲಯವನ್ನು ಪ್ರವೇಶಿಸಿದ್ದರು. ಭಕ್ತರ ವಿರೋಧದ ಮಧ್ಯೆ ದೇವಾಲಯವನ್ನು ಪ್ರವೇಶಿಸಿದ್ದಕ್ಕೆ ಕೋಪಗೊಂಡಿರುವ ಅತ್ತೆ ಮತ್ತು ಮಾವ ಕನಕ ದುರ್ಗ ಅವರಿಗೆ ಮನೆಯ ಪ್ರವೇಶವನ್ನು ನಿರಾಕರಿಸಿ ಹೊರದಬ್ಬಿದ್ದಾರೆ.
ಕನಕದುರ್ಗಾ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಿದ್ದನ್ನು ವಿರೋಧಿಸಿ ಆಕೆಯ ಅತ್ತೆ ಹಲ್ಲೆ ಮಾಡಿದ್ದರು. ಆಕೆಯ ಸೋದರ ಭರತ್ ಭೂಷಣ್ ಕೂಡ ವಿರೋಧಿಸಿದ್ದರು. ಪತಿಯ ಮನೆಯಿಂದ ಹೊರಹಾಕಲ್ಪಟ್ಟ ಕನಕದುರ್ಗಗೆ ತನ್ನ ಅಣ್ಣ ಭರತ್ ಕೂಡ ಆಶ್ರಯ ನೀಡಲಿಲ್ಲ. ತನ್ನ ಮನೆಗೆ ಕಾಲಿಡದಂತೆ ಅಣ್ಣ ಕೂಡ ತಾಕೀತು ಮಾಡಿದ್ದಾರೆ.
ಅಯ್ಯಪ್ಪ ದೇವಾಲಯದ ಸಂಪ್ರದಾಯವನ್ನು ಮುರಿದಿದ್ದಕ್ಕೆ ಕನಕದುರ್ಗ ಸಾರ್ವಜನಿಕವಾಗಿ ಹಿಂದೂ ಸಮುದಾಯ ಮತ್ತು ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಕ್ಷಮೆ ಕೇಳದ ಹೊರತು ಆಕೆಯನ್ನು ಮನೆಗೆ ಸೇರಿಸಿಕೊಳ್ಳುವುದಿಲ್ಲ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…