Featured

ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗಾಗೆ ಕುಟುಂಬ ಸದಸ್ಯರಿಂದ ಬಹಿಷ್ಕಾರ.. – Vishwanews24

ತಿರುವನಂತಪುರಂ: ಸುಪ್ರೀಮ್ ಕೋರ್ಟ್ ತೀರ್ಮಾನದಂತೆ ಹಲವು ವಿಧದ ವಿರೋಧಗಳ ನಡುವೆಯೂ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದಕ್ಕೆ ತನ್ನ ಅತ್ತೆಯಿಂದಲೇ ಹಲ್ಲೆಗೀಡಾಗಿ ಸುದ್ದಿಯಾಗಿದ್ದ ಕೇರಳದ ಕನಕದುರ್ಗ ಎಂಬ ಮಹಿಳೆಗೆ ಇದೀಗ ಕುಟುಂಬ ಸದಸ್ಯರು ಬಹಿಷ್ಕಾರ ಹಾಕಿದ್ದಾರೆ.

ಅತ್ತೆಯಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬ ಸದಸ್ಯರು ಮನೆ ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಈಗ ಕನಕದುರ್ಗ ಸರ್ಕಾರದ ವಸತಿ ನಿಲಯದಲ್ಲಿ ಆಶ್ರಯ ಪಡೆದಿದ್ದಾರೆ.

ಡಿಸೆಂಬರ್ 22 ರಂದು ತಿರುವನಂತಪುರಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತೇನೆ ಎಂದು ಕನಕದುರ್ಗ ಸುಳ್ಳು ಹೇಳಿ ದೇವಾಲಯವನ್ನು ಪ್ರವೇಶಿಸಿದ್ದರು. ಭಕ್ತರ ವಿರೋಧದ ಮಧ್ಯೆ ದೇವಾಲಯವನ್ನು ಪ್ರವೇಶಿಸಿದ್ದಕ್ಕೆ ಕೋಪಗೊಂಡಿರುವ ಅತ್ತೆ ಮತ್ತು ಮಾವ ಕನಕ ದುರ್ಗ ಅವರಿಗೆ ಮನೆಯ ಪ್ರವೇಶವನ್ನು ನಿರಾಕರಿಸಿ ಹೊರದಬ್ಬಿದ್ದಾರೆ.

ಕನಕದುರ್ಗಾ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಿದ್ದನ್ನು ವಿರೋಧಿಸಿ ಆಕೆಯ ಅತ್ತೆ ಹಲ್ಲೆ ಮಾಡಿದ್ದರು. ಆಕೆಯ ಸೋದರ ಭರತ್ ಭೂಷಣ್ ಕೂಡ ವಿರೋಧಿಸಿದ್ದರು. ಪತಿಯ ಮನೆಯಿಂದ ಹೊರಹಾಕಲ್ಪಟ್ಟ ಕನಕದುರ್ಗಗೆ  ತನ್ನ ಅಣ್ಣ ಭರತ್ ಕೂಡ ಆಶ್ರಯ ನೀಡಲಿಲ್ಲ. ತನ್ನ ಮನೆಗೆ ಕಾಲಿಡದಂತೆ ಅಣ್ಣ ಕೂಡ ತಾಕೀತು ಮಾಡಿದ್ದಾರೆ.

ಅಯ್ಯಪ್ಪ ದೇವಾಲಯದ ಸಂಪ್ರದಾಯವನ್ನು ಮುರಿದಿದ್ದಕ್ಕೆ ಕನಕದುರ್ಗ ಸಾರ್ವಜನಿಕವಾಗಿ ಹಿಂದೂ ಸಮುದಾಯ ಮತ್ತು ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಕ್ಷಮೆ ಕೇಳದ ಹೊರತು ಆಕೆಯನ್ನು ಮನೆಗೆ ಸೇರಿಸಿಕೊಳ್ಳುವುದಿಲ್ಲ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago