ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ.
ಗುರುವಾರ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೋಟ್ಟಿಯನ್ನು ವಶಕ್ಕೆ ಪಡೆದಿದ್ದ ವಿಶೇಷ ತನಿಖಾ ತಂಡ, ಅವರನ್ನು ತಿರುವನಂತಪುರಂನಲ್ಲಿ ತೀವ್ರ ವಿಚಾರಣೆಗೊಳಪಡಿಸಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವಿಚಾರಣೆಯ ಬಳಿಕ ಉನ್ನಿಕೃಷ್ಣನ್ ಪೋಟ್ಟಿಯನ್ನು ಬಂಧಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇಂದು ಮಧ್ಯಾಹ್ನದ ವೇಳೆಗೆ ಉನ್ನಿಕೃಷ್ಣನ್ ಪೋಟ್ಟಿಯನ್ನು ಪಟ್ಟಣಂತಿಟ್ಟ ನ್ಯಾಯಾಲಯದೆದುರು ಹಾಜರುಪಡಿಸಲಾಗುವುದು. ವಿಚಾರಣೆಯ ವೇಳೆ ಆರೋಪಿಯನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ವಿಶೇಷ ತನಿಖಾ ತಂಡ ನ್ಯಾಯಾಲಯವನ್ನು ಕೋರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ವಿಶೇಷ ತನಿಖಾ ತಂಡ ಎರಡು ಪ್ರಕರಣಗಳ ತನಿಖೆ ನಡೆಸುತ್ತಿದೆ. ದ್ವಾರಪಾಲಕ ಮೂರ್ತಿಗಳಲ್ಲಿನ ಚಿನ್ನ ಕಳವು ಹಾಗೂ ದೇವಸ್ಥಾನ ಗರ್ಭಗುಡಿಯ ಬಾಗಿಲಿನ ಚೌಕಟ್ಟಿನಲ್ಲಿದ್ದ ಚಿನ್ನ ಕಾಣೆಯಾದ ಎರಡು ಪ್ರಕರಣಗಳ ತನಿಖೆಯನ್ನು ವಿಶೇಷ ತನಿಖಾ ತಂಡ ಕೈಗೊಂಡಿದೆ.
ಇದಕ್ಕೂ ಮುನ್ನ, ತಿರುವಾಂಕೂರು ದೇವಸ್ವಂ ಮಂಡಳಿಯು ಉನ್ನಿಕೃಷ್ಣನ್ ಪೋಟ್ಟಿಯನ್ನು ಎರಡು ದಿನಗಳ ವಿಚಾರಣೆಗೊಳಪಡಿಸಿತ್ತು. ಈ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಲು ವಿಶೇಷ ತನಿಖಾ ತಂಡಕ್ಕೆ ಕೇರಳ ಹೈಕೋರ್ಟ್ ಆರು ವಾರಗಳ ಗಡುವು ವಿಧಿಸಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…