ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ.
ಗುರುವಾರ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೋಟ್ಟಿಯನ್ನು ವಶಕ್ಕೆ ಪಡೆದಿದ್ದ ವಿಶೇಷ ತನಿಖಾ ತಂಡ, ಅವರನ್ನು ತಿರುವನಂತಪುರಂನಲ್ಲಿ ತೀವ್ರ ವಿಚಾರಣೆಗೊಳಪಡಿಸಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವಿಚಾರಣೆಯ ಬಳಿಕ ಉನ್ನಿಕೃಷ್ಣನ್ ಪೋಟ್ಟಿಯನ್ನು ಬಂಧಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇಂದು ಮಧ್ಯಾಹ್ನದ ವೇಳೆಗೆ ಉನ್ನಿಕೃಷ್ಣನ್ ಪೋಟ್ಟಿಯನ್ನು ಪಟ್ಟಣಂತಿಟ್ಟ ನ್ಯಾಯಾಲಯದೆದುರು ಹಾಜರುಪಡಿಸಲಾಗುವುದು. ವಿಚಾರಣೆಯ ವೇಳೆ ಆರೋಪಿಯನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ವಿಶೇಷ ತನಿಖಾ ತಂಡ ನ್ಯಾಯಾಲಯವನ್ನು ಕೋರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ವಿಶೇಷ ತನಿಖಾ ತಂಡ ಎರಡು ಪ್ರಕರಣಗಳ ತನಿಖೆ ನಡೆಸುತ್ತಿದೆ. ದ್ವಾರಪಾಲಕ ಮೂರ್ತಿಗಳಲ್ಲಿನ ಚಿನ್ನ ಕಳವು ಹಾಗೂ ದೇವಸ್ಥಾನ ಗರ್ಭಗುಡಿಯ ಬಾಗಿಲಿನ ಚೌಕಟ್ಟಿನಲ್ಲಿದ್ದ ಚಿನ್ನ ಕಾಣೆಯಾದ ಎರಡು ಪ್ರಕರಣಗಳ ತನಿಖೆಯನ್ನು ವಿಶೇಷ ತನಿಖಾ ತಂಡ ಕೈಗೊಂಡಿದೆ.
ಇದಕ್ಕೂ ಮುನ್ನ, ತಿರುವಾಂಕೂರು ದೇವಸ್ವಂ ಮಂಡಳಿಯು ಉನ್ನಿಕೃಷ್ಣನ್ ಪೋಟ್ಟಿಯನ್ನು ಎರಡು ದಿನಗಳ ವಿಚಾರಣೆಗೊಳಪಡಿಸಿತ್ತು. ಈ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಲು ವಿಶೇಷ ತನಿಖಾ ತಂಡಕ್ಕೆ ಕೇರಳ ಹೈಕೋರ್ಟ್ ಆರು ವಾರಗಳ ಗಡುವು ವಿಧಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…