Featured

ಶಬರಿಮಲೆ ತೀರ್ಪು ಹಿನ್ನಲೆ : ಸೋಮವಾರ ಕೇರಳ ಬಂದ್​ಗೆ ಕರೆನೀಡಿದ ಶಿವಸೇನೆ

ತಿರುವನಂತಪುರಂ,: ಕೇರಳದ ಶಬರಿಮಲೆ ದೇವಸ್ಥಾನದ ಒಳಗೆ ಎಲ್ಲ ವಯೋಮಾನದ ಮಹಿಳೆಯರಿಗೂ ಮುಕ್ತ ಪ್ರವೇಶಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂಕೋರ್ಟ್​ನ ಈ ತೀರ್ಪನ್ನ ಹಲವರು ಸ್ವಾಗತಿಸಿದರೆ, ಇನ್ನೂ ಹಲವರು ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ.

ಇದೀಗ ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಅಕ್ಟೋಬರ್​ 1 ರಂದು ಶಿವಸೇನೆಯು ಕೇರಳ ಬಂದ್ ಗೆ ಕರೆನೀಡಿದೆ. ಈ ಸಂಬಂಧ ಇತರ ಧಾರ್ಮಿಕ ಸಂಸ್ಥೆಗಳ ಸಹಯೋಗದೊಂದಿಗೆ ​ ತೀರ್ಪನ್ನು ಮರುಪರಿಶೀಲಿಸುವಂತೆ ಮೇಲ್ಮನವಿ ಸಲ್ಲಿಸುತ್ತೇವೆಂದು ಶಿವಸೇನೆ ರಾಜ್ಯ ಮುಖ್ಯಸ್ಥ ಭುವನೇಶ್ವರಾ ಚಂದ್ರ ಹೇಳಿದ್ದಾರೆ.

ಶಬರಿಮಲೆ  ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ನೀಡಿರುವ ಸುಪ್ರೀಂಕೋರ್ಟ್‌ ತೀರ್ಪು ದೇಶಾದ್ಯಂತ ಬಹುಚರ್ಚಿತ ವಿಷಯವಾಗಿದೆ. ಅದರಲ್ಲೂ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಿಂದ ಶಬರಿಮಲೆಗೆ ಲಕ್ಷಾಂತರ ಭಕ್ತರು ಪ್ರತಿವರ್ಷ ದರ್ಶನಕ್ಕಾಗಿ ‌ಹೋಗುತ್ತಾರೆ. ಹೀಗಾಗಿ, ಕರ್ನಾಟಕದ ಭಕ್ತರ ವಲಯದಲ್ಲೂ ತೀರ್ಪು ನೋವನ್ನುಂಟುಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಕೋರ್ಟ್ ತೀರ್ಪನ್ನು ವಿರೋಧಿಸುವ ಸಂಘಟನೆಗಳು ಬಂದ್ ಗೆ ಬೆಂಬಲ ನೀಡುವ ಸಾಧ್ಯತೆ ಇದೆ. 800 ವರ್ಷಗಳ ಅಯ್ಯಪ್ಪ ದೇವಾಲಯದ ಇತಿಹಾಸದಲ್ಲಿ ಮಹಿಳೆಯರ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಋತುಮತಿಯಾಗುವ ಹೆಣ್ಣು ಮಕ್ಕಳು ದೇವಾಲಯಕ್ಕೆ ಪ್ರವೇಶಿಸುವುದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಈ ದೇವಾಲಯದ ಆಡಳಿತ ಮಂಡಳಿಯೇ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.

ಆದರೆ ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ ಈ ನಿರ್ಬಂಧವನ್ನು ತೆರವುಗೊಳಿಸಲಾಗಿದ್ದು, ಸುಪ್ರೀಂ ತೀರ್ಪನ್ನು ಹಲವರು ಖಂಡಿಸಿದ್ದಾರೆ.

 

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

12 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

13 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

13 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

13 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

14 hours ago