ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಮಹಿಳೆಯರ ದೇಗುಲ ಪ್ರವೇಶಕ್ಕೆ ಅಸ್ತು ಎಂದಿದೆ.
ಮಹಿಳೆಯ ಕುರಿತ ಗ್ರಹಿಕೆ ಬದಲಾಗಬೇಕು. ಸಾಮಾಜಿಕ ಬದಲಾವಣೆ ಅಗತ್ಯವಿದೆ. ಮಹಿಳೆಯರನ್ನು ಸಮಾನವಾಗಿ ಪರಿಗಣಿಸಬೇಕು. ಮಹಿಳೆ ಬಗೆಗಿನ ದೃಷ್ಟಿಕೋನ ಬದಲಾಗಬೇಕು. ಮಹಿಳೆ ಬಗೆಗಿನ ತಾರತಮ್ಯ ನಿವಾರಣೆ ಆಗಬೇಕು. ಮಹಿಳೆಯರು ಅಬಲೆಯರಲ್ಲ. ಮಹಿಳೆಯರ ಬಗೆಗಿನ ಪೂಜ್ಯ ಭಾವನೆಗೆ ಧಕ್ಕೆ ಆಗಬಾರದು. ಧರ್ಮದಲ್ಲೂ ಪುರುಷ ಪ್ರಧಾನವಾಗಬಾರದು ಎಂದು ನ್ಯೂಯಾಧೀಶರಾದ ಮಿಶ್ರಾ, ಖಾನ್ವಿಲ್ಕರ್ ಜಂಟಿ ತೀರ್ಪು ನೀಡಿದ್ದಾರೆ.
ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನಿಷೇಧಿಸಿರುವುದನ್ನು ವಿರೋಧಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ನಿತ್ಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.
ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮಹಿಳೆಯರ ನಿಷೇಧ ಕ್ರಮವನ್ನು ಪ್ರಶ್ನಿಸಿದ್ದ ಸಂವಿಧಾನ ಪೀಠ, ಮಹಿಳೆಯರ ಧಾರ್ವಿುಕ ಹಕ್ಕನ್ನು ಕಸಿದುಕೊಳ್ಳುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿತ್ತು.
2006ರಲ್ಲಿ ಇಂಡಿಯನ್ ಯಂಗ್ ಲಾಯರ್ಸ್ ಅಸೋಸಿಯೇಶನ್ ಹಾಗೂ ಇತರರು ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. 2016ರ ಜನವರಿಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಕಳೆದ ಅಕ್ಟೋಬರ್ 13ರಂದು ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು..
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…