Featured

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಮುಕ್ತ ಪ್ರವೇಶ ಸುಪ್ರೀಂನಿಂದ ಐತಿಹಾಸಿಕ ತೀರ್ಪು

ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಮಹಿಳೆಯರ ದೇಗುಲ ಪ್ರವೇಶಕ್ಕೆ ಅಸ್ತು ಎಂದಿದೆ.

ಮಹಿಳೆಯ ಕುರಿತ ಗ್ರಹಿಕೆ ಬದಲಾಗಬೇಕು. ಸಾಮಾಜಿಕ ಬದಲಾವಣೆ ಅಗತ್ಯವಿದೆ. ಮಹಿಳೆಯರನ್ನು ಸಮಾನವಾಗಿ ಪರಿಗಣಿಸಬೇಕು. ಮಹಿಳೆ ಬಗೆಗಿನ ದೃಷ್ಟಿಕೋನ ಬದಲಾಗಬೇಕು. ಮಹಿಳೆ ಬಗೆಗಿನ ತಾರತಮ್ಯ ನಿವಾರಣೆ ಆಗಬೇಕು. ಮಹಿಳೆಯರು ಅಬಲೆಯರಲ್ಲ. ಮಹಿಳೆಯರ ಬಗೆಗಿನ ಪೂಜ್ಯ ಭಾವನೆಗೆ ಧಕ್ಕೆ ಆಗಬಾರದು. ಧರ್ಮದಲ್ಲೂ ಪುರುಷ ಪ್ರಧಾನವಾಗಬಾರದು ಎಂದು ನ್ಯೂಯಾಧೀಶರಾದ ಮಿಶ್ರಾ, ಖಾನ್ವಿಲ್ಕರ್ ಜಂಟಿ ತೀರ್ಪು ನೀಡಿದ್ದಾರೆ.

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನಿಷೇಧಿಸಿರುವುದನ್ನು ವಿರೋಧಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ನಿತ್ಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.

ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮಹಿಳೆಯರ ನಿಷೇಧ ಕ್ರಮವನ್ನು ಪ್ರಶ್ನಿಸಿದ್ದ ಸಂವಿಧಾನ ಪೀಠ, ಮಹಿಳೆಯರ ಧಾರ್ವಿುಕ ಹಕ್ಕನ್ನು ಕಸಿದುಕೊಳ್ಳುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿತ್ತು.

2006ರಲ್ಲಿ ಇಂಡಿಯನ್‌ ಯಂಗ್‌ ಲಾಯರ್ಸ್‌ ಅಸೋಸಿಯೇಶನ್‌ ಹಾಗೂ ಇತರರು ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. 2016ರ ಜನವರಿಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಕಳೆದ ಅಕ್ಟೋಬರ್ 13ರಂದು ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು..

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

7 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

32 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

36 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

43 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

54 minutes ago

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

18 hours ago