ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದರಿಂದ ಶಬರಿಮಲೆ ದೇವಾಲಯಕ್ಕೆ ತೆರಳಲು ಮತ್ತೆ ಅವಕಾಶ ಸಿಕ್ಕಿದೆ.
ಕೊರೊನಾ ಪ್ರಕರಣಗಳ ಸಂಖ್ತೆ ಇಳಿಕೆಯಾದ ಹಿನ್ನೆಲೆ ಅಯ್ಯಪ್ಪಸ್ವಾಮಿ ಸನ್ನಿಧಿಗೆ ತೆರಳುವುದಕ್ಕೆ ಮಾರ್ಗ ಓಪನ್ ಆಗಿದ್ದು, ಪಂಪಾದಿಂದ ನೀಲಿಮಲ ಮಾರ್ಗದಲ್ಲಿ ತೆರಳಲು ಅವಕಾಶ ನೀಡಲಾಗುತ್ತಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗ ಮಧ್ಯೆ ಆರೋಗ್ಯ ತಪಾಸಣೆಗೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕೇರಳ ಸಿಎಂ ಕಚೇರಿಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.
ಕಳೆದ ವರ್ಷ ಶಬರಿಮಲೆಗೆ ಹೋಗಲು ಸಾಧ್ಯವಾಗದ ಕಾರಣ ಭಕ್ತರು ಬೇರೆ ಮಾರ್ಗ ಕಂಡುಕೊಂಡಿದ್ದರು. ಇರುಮುಡಿ ಹೊತ್ತು ಮಾಲಾಧಾರಿಗಳು ಕೋಟೆನಾಡಿಗೆ ಆಗಮಿಸುತ್ತಿದ್ದರು. ಚಿತ್ರದುರ್ಗ ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಶಬರಿಮಲೆ ಮಾದರಿಯಲ್ಲಿಯೇ 18 ಮೆಟ್ಟಿಲುಗಳನ್ನು ಏರಿ ದೇವರ ಆಶೀರ್ವಾದ ಪಡೆಯುತ್ತಿದ್ದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…