ತಿರುವನಂತಪುರಂ: ಕೇರಳ ಸರ್ಕಾರ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆಯನ್ನು ಪ್ರತಿದಿನ 60,000ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿಕೆ ಮಾಡಿದೆ.
ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಭಕ್ತರ ಸಂಖ್ಯೆ ಏರಿಕೆ ಮಾಡಲಾಗಿದ್ದರೂ, ವರ್ಚುವಲ್ ಸರತಿ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ತಿಳಿದುಬಂದಿದೆ.
ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಬೆಳಗ್ಗೆ 7 ರಿಂದ ಮಧ್ಯಾಹ್ನದವರೆಗೆ ನೆಯ್ಯಭಿಷೇಕವನ್ನು ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರ ಕಚೇರಿ ತಿಳಿಸಿದೆ. ಮೂಲಗಳ ಪ್ರಕಾರ ಸನ್ನಿಧಾನದಲ್ಲಿ ಭಕ್ತರಿಗಾಗಿ 500 ಕೊಠಡಿಗಳ ಸೌಲಭ್ಯವನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಆದರೆ ಕೋವಿಡ್-19 ನಿಯಮಗಳಿಂದಾಗಿ ಪ್ರತಿ ಕೊಠಡಿಯಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ.
ಶಬರಿಮಲೆಯಲ್ಲಿ ಕಟ್ಟುನಿಟ್ಟಾದ ಕೋವಿಡ್-19 ಪ್ರೋಟೋಕಾಲ್ಗಳನ್ನು ಅನುಸರಿಸಲಾಗುತ್ತಿದೆ. ಎರಡು ಹಂತದ ಲಸಿಕೆ ಪ್ರಮಾಣಪತ್ರ ಅಥವಾ 72 ಗಂಟೆಗಳ ಮೊದಲಿನ ಆರ್ಟಿ-ಪಿಸಿಆರ್ನ ನೆಗೆಟಿವ್ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ. ಕೋವಿಡ್ -19 ಪ್ರೋಟೋಕಾಲ್ಗಳ ಪ್ರಕಾರ, ಪ್ರತಿಯೊಂದು ಕೊಠಡಿಗಳಲ್ಲಿ ನೈರ್ಮಲ್ಯೀಕರಣವನ್ನು ನಡೆಸುವಂತೆ ತಿರುವಾಂಕೂರ್ ದೇವಸ್ವಂ ಬೋರ್ಡ್ (ಟಿಡಿಬಿ) ಅನ್ನು ಕೇಳಲಾಗಿದೆ.
ಪಂಬಾದಿಂದ ನೀಲಿಮಲೈ, ಅಪ್ಪಾಚಿಮೇಡು ಮತ್ತು ಮರಕ್ಕೂಟಂ ಮೂಲಕ ಹಾದುಹೋಗುವ ಸಾಂಪ್ರದಾಯಿಕ ಮಾರ್ಗವನ್ನು (ದೊಡ್ಡಪಾದ) ಭಕ್ತರಿಗೆ ತೆರೆಯಲಾಗುತ್ತಿದೆ. ಶಬರಿಮಲೆಯಲ್ಲಿ ಭಕ್ತರು ಅಥವಾ ಅಧಿಕಾರಿಗಳಲ್ಲಿ ಯಾವುದೇ ಓಮಿಕ್ರಾನ್ ಪ್ರಕರಣಗಳು ಪತ್ತೆಯಾದರೆ, ಎಲ್ಲಾ ಸಡಿಲಿಕೆಗಳನ್ನು ಒಂದೇ ಬಾರಿಗೆ ಹಿಂಪಡೆಯಲಾಗುವುದು ಎಂದು ಕಂದಾಯ (ದೇವಸ್ವಂ) ಇಲಾಖೆಯು ಆದೇಶ ಹೊರಡಿಸಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…