ತಿರುವನಂತಪುರಂ: ಕೇರಳ ಸರ್ಕಾರ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆಯನ್ನು ಪ್ರತಿದಿನ 60,000ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿಕೆ ಮಾಡಿದೆ.
ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಭಕ್ತರ ಸಂಖ್ಯೆ ಏರಿಕೆ ಮಾಡಲಾಗಿದ್ದರೂ, ವರ್ಚುವಲ್ ಸರತಿ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ತಿಳಿದುಬಂದಿದೆ.
ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಬೆಳಗ್ಗೆ 7 ರಿಂದ ಮಧ್ಯಾಹ್ನದವರೆಗೆ ನೆಯ್ಯಭಿಷೇಕವನ್ನು ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರ ಕಚೇರಿ ತಿಳಿಸಿದೆ. ಮೂಲಗಳ ಪ್ರಕಾರ ಸನ್ನಿಧಾನದಲ್ಲಿ ಭಕ್ತರಿಗಾಗಿ 500 ಕೊಠಡಿಗಳ ಸೌಲಭ್ಯವನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಆದರೆ ಕೋವಿಡ್-19 ನಿಯಮಗಳಿಂದಾಗಿ ಪ್ರತಿ ಕೊಠಡಿಯಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ.
ಶಬರಿಮಲೆಯಲ್ಲಿ ಕಟ್ಟುನಿಟ್ಟಾದ ಕೋವಿಡ್-19 ಪ್ರೋಟೋಕಾಲ್ಗಳನ್ನು ಅನುಸರಿಸಲಾಗುತ್ತಿದೆ. ಎರಡು ಹಂತದ ಲಸಿಕೆ ಪ್ರಮಾಣಪತ್ರ ಅಥವಾ 72 ಗಂಟೆಗಳ ಮೊದಲಿನ ಆರ್ಟಿ-ಪಿಸಿಆರ್ನ ನೆಗೆಟಿವ್ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ. ಕೋವಿಡ್ -19 ಪ್ರೋಟೋಕಾಲ್ಗಳ ಪ್ರಕಾರ, ಪ್ರತಿಯೊಂದು ಕೊಠಡಿಗಳಲ್ಲಿ ನೈರ್ಮಲ್ಯೀಕರಣವನ್ನು ನಡೆಸುವಂತೆ ತಿರುವಾಂಕೂರ್ ದೇವಸ್ವಂ ಬೋರ್ಡ್ (ಟಿಡಿಬಿ) ಅನ್ನು ಕೇಳಲಾಗಿದೆ.
ಪಂಬಾದಿಂದ ನೀಲಿಮಲೈ, ಅಪ್ಪಾಚಿಮೇಡು ಮತ್ತು ಮರಕ್ಕೂಟಂ ಮೂಲಕ ಹಾದುಹೋಗುವ ಸಾಂಪ್ರದಾಯಿಕ ಮಾರ್ಗವನ್ನು (ದೊಡ್ಡಪಾದ) ಭಕ್ತರಿಗೆ ತೆರೆಯಲಾಗುತ್ತಿದೆ. ಶಬರಿಮಲೆಯಲ್ಲಿ ಭಕ್ತರು ಅಥವಾ ಅಧಿಕಾರಿಗಳಲ್ಲಿ ಯಾವುದೇ ಓಮಿಕ್ರಾನ್ ಪ್ರಕರಣಗಳು ಪತ್ತೆಯಾದರೆ, ಎಲ್ಲಾ ಸಡಿಲಿಕೆಗಳನ್ನು ಒಂದೇ ಬಾರಿಗೆ ಹಿಂಪಡೆಯಲಾಗುವುದು ಎಂದು ಕಂದಾಯ (ದೇವಸ್ವಂ) ಇಲಾಖೆಯು ಆದೇಶ ಹೊರಡಿಸಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…