ತಿರುವನಂತಪುರ: ಶಬರಿಮಲೆಗೆ ಹೋಗುತ್ತಿದ್ದ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಪೆಪ್ಪರ್ ಸ್ಪ್ರೇ ಸಿಂಪಡಿಸಿದ ಘಟನೆ ಕೇರಳದ ಕೊಚ್ಚಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಡೆದಿದೆ
ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಇದರಲ್ಲಿ ಬಿಂದು ಅಮ್ಮಣ್ಣಿ ವ್ಯಕ್ತಿಯೋರ್ವ ಪೆಪ್ಪರ್ ಸ್ಪ್ರೇ ದಾಳಿ ನಡೆಸಿದಾಗ, ಆಕೆ ಮುಖವನ್ನು ಮುಚ್ಚುತ್ತಾ ಆತನಿಂದ ರಕ್ಷಣೆ ಪಡೆಯಲು ದೂರ ಓಡಿಹೋಗುವ ದೃಶ್ಯ ದಾಖಲಾಗಿದೆ. ಮತ್ತೊಂದೆಡೆ ಆಕೆ “ಶಬರಿಮಲೆಗೆ ಮಹಿಳೆಯರ ಭೇಟಿಯನ್ನು ತಡೆಯುವಂತಿಲ್ಲ ನ್ಯಾಯಾಂಗ ನಿಂದನೆಯಾಗುತ್ತದೆ” ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಿರುವಾಗ ಆಕೆಯ ಹೇಳಿಕೆಯನ್ನು ವಿರೋಧಿಸಿ ಮದ್ಯವಯಸ್ಕ ವ್ಯಕ್ತಿಗೆ ಬಿಂದು ಅಮ್ಮಣ್ಣಿ ಕೋಪಗೊಂಡು ತನ್ನ ಕೈ- ಮುಖಕ್ಕೆ ಅಂಟಿದ್ದ ಪೆಪ್ಪರ್ ಸ್ಪ್ರೇಯನ್ನು ಆತನ ಮುಖಕ್ಕೆ ಹಚ್ಚುವ ದೃಶ್ಯವೂ ಕಂಡುಬಂದಿದೆ. ಸದ್ಯ ಬಿಂದು ಅಮ್ಮಣ್ಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇನ್ನೊಂದೆಡೆ ಮಹಿಳಾ ಹಕ್ಕುಗಳ ಕಾರ್ಯಕರ್ತೆ ತೃಪ್ತಿ ದೇಸಾಯಿ ಕೊಚ್ಚಿಗೆ ಬಂದಿಳಿದಿದ್ದು, ಇಂದು ಶಬರಿ ಮಲೆಗೆ ಏರುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಸರಕಾರ ಅಥವಾ ಸ್ಥಳೀಯ ಪೊಲೀಸರು ನನ್ನನ್ನು ತಡೆದರೆ ಅದು ಕಾನೂನು ಉಲ್ಲಂಘನೆಯಾಗುತ್ತದೆ. ದೇವಸ್ಥಾನಕ್ಕೆ ಭೇಟಿ ನೀಡುವುದು ನನ್ನ ಹಕ್ಕು, ಸರ್ಕಾರ ರಕ್ಷಣೆ ನೀಡಿದರೂ ನೀಡದಿದ್ದರೂ ನಾನು ಶಬರಿಮಲೆ ಏರಿಯೇ ಸಿದ್ದ ಎಂದು ಹೇಳಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…