ತಿರುವನಂತಪುರ: ಶಬರಿಮಲೆಗೆ ಹೋಗುತ್ತಿದ್ದ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಪೆಪ್ಪರ್ ಸ್ಪ್ರೇ ಸಿಂಪಡಿಸಿದ ಘಟನೆ ಕೇರಳದ ಕೊಚ್ಚಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಡೆದಿದೆ
ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಇದರಲ್ಲಿ ಬಿಂದು ಅಮ್ಮಣ್ಣಿ ವ್ಯಕ್ತಿಯೋರ್ವ ಪೆಪ್ಪರ್ ಸ್ಪ್ರೇ ದಾಳಿ ನಡೆಸಿದಾಗ, ಆಕೆ ಮುಖವನ್ನು ಮುಚ್ಚುತ್ತಾ ಆತನಿಂದ ರಕ್ಷಣೆ ಪಡೆಯಲು ದೂರ ಓಡಿಹೋಗುವ ದೃಶ್ಯ ದಾಖಲಾಗಿದೆ. ಮತ್ತೊಂದೆಡೆ ಆಕೆ “ಶಬರಿಮಲೆಗೆ ಮಹಿಳೆಯರ ಭೇಟಿಯನ್ನು ತಡೆಯುವಂತಿಲ್ಲ ನ್ಯಾಯಾಂಗ ನಿಂದನೆಯಾಗುತ್ತದೆ” ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಿರುವಾಗ ಆಕೆಯ ಹೇಳಿಕೆಯನ್ನು ವಿರೋಧಿಸಿ ಮದ್ಯವಯಸ್ಕ ವ್ಯಕ್ತಿಗೆ ಬಿಂದು ಅಮ್ಮಣ್ಣಿ ಕೋಪಗೊಂಡು ತನ್ನ ಕೈ- ಮುಖಕ್ಕೆ ಅಂಟಿದ್ದ ಪೆಪ್ಪರ್ ಸ್ಪ್ರೇಯನ್ನು ಆತನ ಮುಖಕ್ಕೆ ಹಚ್ಚುವ ದೃಶ್ಯವೂ ಕಂಡುಬಂದಿದೆ. ಸದ್ಯ ಬಿಂದು ಅಮ್ಮಣ್ಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇನ್ನೊಂದೆಡೆ ಮಹಿಳಾ ಹಕ್ಕುಗಳ ಕಾರ್ಯಕರ್ತೆ ತೃಪ್ತಿ ದೇಸಾಯಿ ಕೊಚ್ಚಿಗೆ ಬಂದಿಳಿದಿದ್ದು, ಇಂದು ಶಬರಿ ಮಲೆಗೆ ಏರುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಸರಕಾರ ಅಥವಾ ಸ್ಥಳೀಯ ಪೊಲೀಸರು ನನ್ನನ್ನು ತಡೆದರೆ ಅದು ಕಾನೂನು ಉಲ್ಲಂಘನೆಯಾಗುತ್ತದೆ. ದೇವಸ್ಥಾನಕ್ಕೆ ಭೇಟಿ ನೀಡುವುದು ನನ್ನ ಹಕ್ಕು, ಸರ್ಕಾರ ರಕ್ಷಣೆ ನೀಡಿದರೂ ನೀಡದಿದ್ದರೂ ನಾನು ಶಬರಿಮಲೆ ಏರಿಯೇ ಸಿದ್ದ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…