ತಿರುವನಂತಪುರ: ಶಬರಿಮಲೆಗೆ ಹೋಗುತ್ತಿದ್ದ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಪೆಪ್ಪರ್ ಸ್ಪ್ರೇ ಸಿಂಪಡಿಸಿದ ಘಟನೆ ಕೇರಳದ ಕೊಚ್ಚಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಡೆದಿದೆ
ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಇದರಲ್ಲಿ ಬಿಂದು ಅಮ್ಮಣ್ಣಿ ವ್ಯಕ್ತಿಯೋರ್ವ ಪೆಪ್ಪರ್ ಸ್ಪ್ರೇ ದಾಳಿ ನಡೆಸಿದಾಗ, ಆಕೆ ಮುಖವನ್ನು ಮುಚ್ಚುತ್ತಾ ಆತನಿಂದ ರಕ್ಷಣೆ ಪಡೆಯಲು ದೂರ ಓಡಿಹೋಗುವ ದೃಶ್ಯ ದಾಖಲಾಗಿದೆ. ಮತ್ತೊಂದೆಡೆ ಆಕೆ “ಶಬರಿಮಲೆಗೆ ಮಹಿಳೆಯರ ಭೇಟಿಯನ್ನು ತಡೆಯುವಂತಿಲ್ಲ ನ್ಯಾಯಾಂಗ ನಿಂದನೆಯಾಗುತ್ತದೆ” ಎಂದು ಮಾಧ್ಯಮದೊಂದಿಗೆ ಮಾತನಾಡುತ್ತಿರುವಾಗ ಆಕೆಯ ಹೇಳಿಕೆಯನ್ನು ವಿರೋಧಿಸಿ ಮದ್ಯವಯಸ್ಕ ವ್ಯಕ್ತಿಗೆ ಬಿಂದು ಅಮ್ಮಣ್ಣಿ ಕೋಪಗೊಂಡು ತನ್ನ ಕೈ- ಮುಖಕ್ಕೆ ಅಂಟಿದ್ದ ಪೆಪ್ಪರ್ ಸ್ಪ್ರೇಯನ್ನು ಆತನ ಮುಖಕ್ಕೆ ಹಚ್ಚುವ ದೃಶ್ಯವೂ ಕಂಡುಬಂದಿದೆ. ಸದ್ಯ ಬಿಂದು ಅಮ್ಮಣ್ಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇನ್ನೊಂದೆಡೆ ಮಹಿಳಾ ಹಕ್ಕುಗಳ ಕಾರ್ಯಕರ್ತೆ ತೃಪ್ತಿ ದೇಸಾಯಿ ಕೊಚ್ಚಿಗೆ ಬಂದಿಳಿದಿದ್ದು, ಇಂದು ಶಬರಿ ಮಲೆಗೆ ಏರುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಸರಕಾರ ಅಥವಾ ಸ್ಥಳೀಯ ಪೊಲೀಸರು ನನ್ನನ್ನು ತಡೆದರೆ ಅದು ಕಾನೂನು ಉಲ್ಲಂಘನೆಯಾಗುತ್ತದೆ. ದೇವಸ್ಥಾನಕ್ಕೆ ಭೇಟಿ ನೀಡುವುದು ನನ್ನ ಹಕ್ಕು, ಸರ್ಕಾರ ರಕ್ಷಣೆ ನೀಡಿದರೂ ನೀಡದಿದ್ದರೂ ನಾನು ಶಬರಿಮಲೆ ಏರಿಯೇ ಸಿದ್ದ ಎಂದು ಹೇಳಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…